ಬೆಂಗಳೂರು: ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ. ನೀಡಲಾಗುವುದು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ.ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ ರೂ.
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ತಾಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ರೂ. ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು, ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು. ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಉತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಹುಲಿಯೂರು ದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ. ಕೆಂಪೇಗೌಡರು ನಿರ್ಮಾಣ ಮಾಡಿದ್ದ ಗೋಪುರಗಳನ್ನು ದಾಟಿ ಬೆಂಗಳೂರು ಮರ್ನಾಲ್ಕು ಪಟ್ಟು ಹೆಚ್ಚು ಬೆಳೆದಿದೆ. ಬೆಂಗಳೂರು ಇಷ್ಟು ಅಗಾಧವಾಗಿ ಬೆಳೆಯಬಹುದು ಎನ್ನುವ ಕಲ್ಪನೆ ಸ್ವತಃ ಕೆಂಪೇಗೌಡರಿಗೆ ಇರಲಿಲ್ಲ. ಈ ನಗರ ಸ್ಥಾಪಿಸಿದ ಮಹಾನ್ ವ್ಯಕ್ತಿಯ ಜಯಂತಿಯನ್ನು ಇತರೇ ಸಾಧಕರ ಜಯಂತಿಯಂತೆ ಆಚರಿಸಬೇಕಿದೆ ಎಂದು ಹೇಳಿದರು.