ಕನ್ನಡ ಚಿತ್ರರಂಗ ಯುವರಾಜ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಹಾಗೂ ಮಗನೊಂದಿಗೆ ಜಯನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ, ರೇವತಿ ಮತ್ತು ಅವ್ಯಾನ್ ದೇವ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ಗರ್ಭಗುಡಿಯ ಮುಂದೆ ಫೋಟೋ ತೆಗೆಸಿಕೊಂಡಿದ್ದು ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಿಖಿಲ್ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ ಸ್ಟಾರ್ ಜೋಡಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದು ಅಭಿಮಾನಿಗಳ ಸಾಮಾಜಿಕ ಜಾಲಾ ತಾಣದಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.
ಇನ್ನೂ ಸಿನಿಮಾದ ವಿಷಯಕ್ಕೆ ಬರುವುದಾದದರೆ 2021ರಲ್ಲಿ ತೆರೆಕಂಡ ರೈಡರ್ ಸಿನಿಮಾದ ಬಳಿಕ ನಿಖಿಲ್ ನಟನೆಯ ಯಾವ ಸಿನಿಮಾಗಳು ರಿಲೀಸ್ ಆಗಿಲ್ಲ. ಯದುವೀರ್ ಸಿನಿಮಾ ಅನೌನ್ಸ್ ಆಗಿದ್ದು ಈ ಚಿತ್ರದಲ್ಲಿ ನಿಖಿಲ್ ಸಖತ್ ಡಿಫರೆಂಟ್ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
2020 ಏಪ್ರಿಲ್ 17ರಂದು ನಿಖಿಲ್ ಕುಮಾರ್ ಮತ್ತು ರೇವತಿ ರಾಮನಗರದ ತೋಟದ ಮನೆಯಲ್ಲಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡರು. ಮಗನಿಗೆ ಅವ್ಯಾನ್ ದೇವ್ ಎಂದು ಹೆಸರಿಟ್ಟಿದ್ದಾರೆ. ಸದ್ಯ ಈ ಜೋಡಿ ಹಕ್ಕಿಗಳು ಆಗಾಗ ವಿದೇಶ ಪ್ರವಾಸಕ್ಕೂ ತೆರಳುತ್ತಿದ್ದು ಅಲ್ಲಿನ ಸುಂದರ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.