ಗದಗ:- 2024 ರ ಲೋಕಸಭಾ ಚುನಾವಣೆಗೆ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು, ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊವನಾಳ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.50 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ.
ಅಲ್ತಾಫ್ ಅಕ್ಕಿಹೊಳೆ ಎನ್ನುವಾತ ಅಕ್ರಮವಾಗಿ ಕಾರಿನಲ್ಲಿ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಲಕ್ಷ್ಮೇಶ್ವರ ಪಟ್ಟಣದಿಂದ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣಕ್ಕೆ ಹೋಗ್ತಿದ್ದ ಕಾರಿನಲ್ಲಿ ಪತ್ತೆಯಾಗಿದೆ.
ಸೂಕ್ತ ದಾಖಲೆಗಳು ಇಲ್ಲದೆ ಸಾಗಿಸುತ್ತಿದ್ದ ಹಣ ಎನ್ನಲಾಗಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.