ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಶಕ್ತಿ ಯೋಜನೆಯು ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡುತ್ತಿದೆ. ಆಧಾರ್ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಒಂದೇ ನಂಬರ್ನ ಎರಡು ಆಧಾರ್ ಕಾರ್ಡ್ಗಳನ್ನು ತೋರಿಸಿ ಪ್ರಯಾಣಿಸಲು ಯತ್ನಿಸಿದ ಇಬ್ಬರು ಮಹಿಳೆಯರು ನಿರ್ವಾಹಕನ ಕೈಗೆ ಸಿಕ್ಕಿಬಿದ್ದಿದ್ದಾರೆ.
ಒಂದು ಆಧಾರ್ ಕಾರ್ಡ್ನ ಎರಡು ಪ್ರತಿಗಳನ್ನು ತೋರಿಸಿ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ನ ನಲ್ಲಿ ಪ್ರಯಾಣ, ಸಿಕ್ಕಿಬಿದ್ದ ಇಬ್ಬರು ಮಹಿಳೆಯರ ಕೃತ್ಯದಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ
ಶಕ್ತಿ ಯೋಜನೆ ಸಹ ಒಂದು. ಅದು ಹೇಗೆ ದುರುಪಯೋಗ ಆಗುತ್ತದೆ ಎಂಬುದಕ್ಕೆ ಇದು ತಾಜಾ ಉದಾಹರಣೆ ಅಷ್ಟೇ. ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಹೀಗಿದ್ದಾಗಲೂ ಇಬ್ಬರು ಮಹಿಳೆಯರು ಮೋಸ ಮಾಡಿ ಪ್ರಯಾಣ ಮಾಡಲು ಮುಂದಾಗಿ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು, ಹುಬ್ಬಳ್ಳಿಯ ನೇಕಾರ ನಗರದಿಂದ ಕಿಮ್ಸ್ ಕಡೆಗೆ ಹೋಗುವ ಬಸ್ನಲ್ಲಿ ಬುರ್ಖಾ ಹಾಕಿರುವ ಇಬ್ಬರು ಮುಸ್ಲಿಂ ಮಹಿಳೆಯರು ಒಂದೇ ಆಧಾರ್ ಕಾರ್ಡ್ನ ಎರಡು ಪ್ರತಿಗಳನ್ನು ತೋರಿಸಿ ಪ್ರಯಾಣಿಸುತ್ತಿದ್ದಾಗ ನಿರ್ವಾಹಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ನು ಎಕ್ಸ್ ನಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದಾರೆ.