ಬೆಂಗಳೂರು: ರಾಜ್ಯ ಸರ್ಕಾರವನ್ನು ಉರುಳಿಸಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಪ್ಲ್ಯಾನ್ ಮಾಡಲಾಗ್ತಿದೆ ಎಂಬ ಕುರಿತಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಐಟಿ ತನಿಖೆ ನಡೆಯಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಉರುಳಿಸುವ ಪ್ಲ್ಯಾನ್ ಮಾಡ್ತಿದ್ದಾರೆ.
ಇದಕ್ಕಾಗಿ 1200 ಕೋಟಿ ರೆಡಿ ಮಾಡ್ಕೊಂಡಿದ್ದಾರಂತೆ. ಇದನ್ನು ಅವರ ನಾಯಕರೇ ಮಾತನಾಡಿದ್ದಾರೆ ಎಂದರು. ಯತ್ನಾಳ್ ನೀಡಿರುವ ಹೇಳಿಕೆಯ ಬಗ್ಗೆ ಐಟಿ ಇಲಾಖೆ ತನಿಖೆ ಮಾಡಬೇಕು. ಇನ್ನು ಬಿಜೆಪಿ ಪ್ಲ್ಯಾನ್ ಗೆ ನಾವೂ ಪ್ಲ್ಯಾನ್ ಆಫ್ ಆ್ಯಕ್ಷನ್ ರೆಡಿ ಮಾಡ್ತಿದ್ದೇವೆ. ಅದು ಏನಂತ ಆಮೇಲೆ ಹೇಳ್ತೇವೆ ಎಂದು ತಿಳಿಸಿದರು.
Brahmi Leaves: ಒಂದೆಲಗದ ಉಪಯೋಗ ಒಂದೆರಡಲ್ಲ! ಈ ಸೊಪ್ಪು ಸೇವಿಸಿ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಿ
ಸದ್ಯದ ರಾಜಕೀಯ ಬೆಳವಣಿಗೆ ನಡುವೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಜೊತೆಗಿನ ಭೇಟಿ ವಿಚಾರವಾಗಿ ಪ್ರಕ್ರಿಯೆ ನೀಡಿದ ಅವರು, ಪರಮೇಶ್ವರ್ ಅವರನ್ನು ಭೇಟಿ ಆದ ಸಂದರ್ಭದಲ್ಲಿ ನಾವು ರಾಜಕೀಯವಾಗಿ ಚರ್ಚೆ ಮಾಡಿಲ್ಲ. ದಿನಾ ರಾಜಕೀಯ ಮಾಡ್ತಾನೇ ಇರ್ತೇವೆ. ಅಭಿವೃದ್ಧಿ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದಿದ್ದೇವೆ. ನಾವು ಅಭಿವೃದ್ಧಿ ಮಾಡಬೇಕಲ್ಲ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಲ್ಲ. ನಾನು ಪರಮೇಶ್ವರ್, ಸಿದ್ದರಾಮಯ್ಯ ಒಟ್ಟಿಗೆ ಇರೋದಲ್ಲ, ನಾವು 136 ಶಾಸಕರೂ ಒಗ್ಗಟ್ಟಾಗಿದ್ದೇವೆ ಎಂದರು.