ಹುಬ್ಬಳ್ಳಿ: ಫೆಬ್ರವರಿ 4 ರಂದು ಕಲಘಟಗಿ ಪೊಲೀಸರು ಇಸ್ಪೀಟ್ ಆಟ ಆಡುತ್ತಿದ್ದ 11 ಜನರನ್ನು ಬಂಧಿಸಿದ್ದರು. ಇವರೆಲ್ಲಾ ಹೊಲದಲ್ಲಿ ಇಸ್ಪೀಟ್ ಆಡುವಾಗ ಏಕಾಏಕಿ ದಾಳಿಮಾಡಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಮನಬಂದಂತೆ ಥಳಿಸಿ, ಅವರಿಂದ ಸುಮಾರು 49 ಸಾವಿರ ರೂಪಾಯಿ ಹಣವನ್ನು ಕಸಿದುಕೊಳ್ತಾರೆ. ನಿಮ್ಮನ್ನು ಬಿಟ್ಟು ಕಳಿಸಬೇಕು ಎಂದ್ರೆ ಹಣಕೊಡಿ ಎಂದು ಪೊಲೀಸರು ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಹಾಂತೇಶ್ ಎಂಬುವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗ್ತಿದೆ. ಫೋನ್ ಪೇಮೂಲಕ ಹಣ ಹಾಕಿಸಿಕೊಂಡಿದ್ದು, ಕೊಡುವುದು ತಡವಾದ ಹಿನ್ನೆಲೆ ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲೇ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಹಲ್ಲೆಗೊಳಗಾದ ಉಮೇಶ್ ಕೊರವಾರ ಈ ಸಂಬಂಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇನ್ನೂ ಆರೋಪಿ ಉಮೇಶ್ ಮಾನವ ಹಕ್ಕು ಆಯೋಗಕ್ಕೆ ಪೊಲೀಸರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.