ಧಾರವಾಡ : ಅಂತ್ಯ ಸಂಸ್ಕಾರಕ್ಕೆ ಹೊರಟಿದ್ದ ಕೃಷರ್ ವಾಹನ ಮರಕ್ಕೆ ಡಿಕ್ಕಿಯಾಗಿದ್ದು, ಪರಿಣಾಮ 16 ಜನರಿಗೆ ಗಾಯಗಳಾಗಿವೆ. ಧಾರವಾಡ ತಾಲೂಕಿನ ಕಲಕೇರಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಎಲ್ಲರೂ ಕಲಕೇರಿ ಗ್ರಾಮಕ್ಕೆ ಅಂತ್ಯ ಸಂಸ್ಕಾರಕ್ಕೆ ಹೊರಟ್ಟಿದ್ದ ವೇಳೆ ವಾಹನ ಮರಕ್ಕೆ ಡಿಕ್ಕಿಯಾಗಿದೆ.
ಅವಘಡದಲ್ಲಿ 16 ಜನರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಧಾರವಾಡ ಜಿಲ್ಲಾಸ್ಪತ್ರೆಗೆ ಗಾಯಾಳುಗಳ ರವಾನೆ ಮಾಡಲಾಗಿದೆ. ಈ ವೇಳೆ ಆಂಬುಲೆನ್ಸ್ ಕೊರೆತೆ ಇದರೂ ಸಹ ಚಾಲಕ ದೇವೇಂದ್ರ ಅದನ್ನು ಲೆಕ್ಕಿಸದೇ ಒಂದು ಆಂಬುಲೆನ್ಸ್ನಲ್ಲಿ 8 ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಭಸ್ಮ