ಉತ್ತರ ಪ್ರದೇಶ:-. ಇಲ್ಲಿನ ಗೋರಖ್ಪುರದ ಶಹಪುರದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ನಾಯಿಯೊಂದು ದಾಳಿ ನಡೆಸಿದೆ.
ವರಮಹಾಲಕ್ಷ್ಮಿ ವ್ರತ: ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ ಜನ!
ಆವಾಸ್ ವಿಕಾಸ್ ಕಾಲೋನಿಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ 22 ವರ್ಷದ ಆಶಿಶ್ ಯಾದವ್ ಮೇಲೆ ನಾಯಿಯು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಿಬಿಎ ವಿದ್ಯಾರ್ಥಿಯಾಗಿರುವ ಆಶಿಶ್ ಯಾದವ್ ಅವರು ರಾತ್ರಿ 9.45ರ ಸುಮಾರಿಗೆ ಮನೆಯ ಹೊರಗೆ ಫೋನ್ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ನಾಯಿ ಏಕಾಏಕಿ ಅವರ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದೆ.
ಆಶಿಶ್ ನಾಯಿಯನ್ನು ಹಿಮ್ಮೆಟ್ಟಿಸಲು ಮತ್ತು ಅದರ ಮೇಲೆ ಪ್ರತಿ ದಾಳಿ ನಡೆಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಬೊಗಳುವುದು ಮತ್ತು ಕಚ್ಚುವುದನ್ನು ನಿಲ್ಲಿಸಲಿಲ್ಲ. ಆಶಿಶ್ ನೆಲಕ್ಕೆ ಬೀಳುತ್ತಿದ್ದಂತೆ ಅದು ಅವರ ಕಾಲಿಗೆ ಕಚ್ಚಿದೆ. ಅಲ್ಲದೇ ಜಿಗಿದು ಮುಖದ ಮೇಲೂ ಕಚ್ಚಿದೆ. ನಾಯಿಯ ದಾಳಿಯಿಂದ ಅವರ ಬಾಯಿ, ಕಣ್ಣು ಮತ್ತು ತುಟಿಗಳಿಂದ ರಕ್ತಸ್ರಾವವಾಗುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದಾದ ನಂತರ ಇನ್ನೊಂದು ಮನೆಯ ಗೇಟ್ ಬಳಿ ನಿಂತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿದ ನಾಯಿ ಆಕೆಯ ಕಾಲನ್ನು ಕಚ್ಚಿದೆ. ಅನಂತರ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರ ಮೇಲೂ ನಾಯಿ ದಾಳಿ ಮಾಡಿದೆ.