ಬೆಳಗಾವಿ:- ಪ್ರಯಾಗರಾಜ್ ನಲ್ಲಿ ಇತ್ತೀಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಬೆಳಗಾವಿ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರ ವಿತರಣೆ ಮಾಡಲಾಗಿದೆ.
ನಾಲ್ವರಿಗೆ ತಲಾ 25 ಲಕ್ಷದಂತೆ 1 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಅಕೌಂಟ್ ಹಣ ಜಮಾವಣೆ ಆಗಿದ್ದು, ಡಿಸಿ ಮೊಹಮ್ಮದ್ ರೋಷನ್ ರಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ಮೊತ್ತ ಜಮೆ ಮಾಡಲಾಗಿದೆ. ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆ ಮಾಡಲಾಗಿದೆ. ಜನವರಿ 29 ರಂದು ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನಕ್ಕೆ ಹೋಗಿದ್ದಾಗ ಕಾಲ್ತುಳಿತಕ್ಕೆ ಈ ನಾಲ್ವರು ಬಲಿಯಾಗಿದ್ದರು. ಬೆಳಗಾವಿಯ ತಾಯಿ ಮಗಳು ಆದಾ ಜೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ, ಮಹಾದೇವಿ ಬಾವನೂರ ಕಾಲ್ತುಳಿದಲ್ಲಿ ಬಲಿ ಆಗಿದ್ದರು. 40 ದಿನಗಳ ಬಳಿಕ ಯುಪಿ ಸರ್ಕಾರ ಘೋಷಿಸಿದಂತೆ ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ಇತ್ತ ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನೆ ಮಾಡಲಾಗಿದೆ.