ನೆಲಮಂಗಲ: ಇಂದು ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಹಿನ್ನೆಲೆ ಇಡೀ ರಾಜ್ಯಕ್ಕೆ ನೆಲಮಂಗಲ ತಾಲೂಕಿನ ಚಿಕ್ಕಮಾರನಹಳ್ಳಿ ವಿದ್ಯಾರ್ಥಿನಿ 5 ನೇ ಸ್ಥಾನ ಪಡೆದಿದ್ದಾರೆ.
ಮಾನವ ಜೀವಕ್ಕೆ ಅಪಾಯಕಾರಿ ಶ್ವಾನಗಳ ಸಾಕಾಣಿಕೆಗೆ ನಿಷೇಧ – ಕೇಂದ್ರದ ಆದೇಶ ರದ್ದುಗೊಳಿಸಿದ ಕೋರ್ಟ್!
ವಿದ್ಯಾರ್ಥಿನಿ ಶಿಲ್ಪಶ್ರೀ 600 ಕ್ಕೆ 594 ಅಂಕಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಸಂಭ್ರಮಿಸಿದೆ. ಹಾರ ಶಾಲು ಹಾಕಿ, ಸಿಹಿ ತಿನ್ನಿಸುವ ಮೂಲಕ ಕಾಲೇಜು ಆಡಳಿತ ಮಂಡಳಿ ಸಂಭವಿಸಿದೆ.
ಇನ್ನೂ ವಿದ್ಯಾರ್ಥಿನಿ ಶಿಲ್ಪಶ್ರೀ ಗ್ರಾಮೀಣ ಪ್ರದೇಶಗಳಲ್ಲಿ ಬಡವರ ಸೇವೆ ಮಾಡಲು ವೈದ್ಯರಾಗುವ ಆಸೆ ಹೊಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)