ಗದಗ:- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆ ಇಲ್ದೆ ಸಾಗಿಸುತ್ತಿದ್ದ ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ.
ಸಾರಿಗೆ ಬಸ್ ನಲ್ಲಿ ಮೂರು ಲಕ್ಷ ಹಣ ತಗೆದುಕೊಂಡು ವೀರಯ್ಯ ಹೊರಟಿದ್ದರು. ಆದರೆ ಸೂಕ್ತ ದಾಖಲೆ ಇಲ್ದೆ ಇಲ್ಲದ ಕಾರಣ ಹಣ ಸೀಜ್ ಮಾಡಲಾಗಿದೆ. ಪೊಲೀಸರು ಅಧಿಕಾರಿಗಳಿಂದ ಬಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.