ಚಿತ್ರದುರ್ಗ : ಅಯೋಧ್ಯಾ, ಕಾಶಿ, ಮಥುರಾ ಈ ದೇಶದ ಬಹುಸಂಖ್ಯಾತರ ಅಸ್ಮಿತೆಯಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ದರ್ಶನ ಭಾಗ್ಯವನ್ನು ಕರುಣಿಸಲಾಗಿದೆ.
ಕರ್ನಾಟಕದಿಂದ 35 ಸಾವಿರ ಮಂದಿಯನ್ನು ರಾಮನ ದರ್ಶನಕ್ಕೆ ಕಳುಹಿಸಲಾಗುತ್ತಿದೆ. ದೇಶದ ಅನೇಕ ಕ್ಯಾಬಿನೆಟ್ ಸಚಿವರುಗಳಿಗೆ ರಾಮನ ದರ್ಶನ ಸಿಕ್ಕಿಲ್ಲ. ಆದರೆ ಅತನ ಭಕ್ತರಾದ ನಿಮಗೆ ರಾಮನ ದರ್ಶನ ಮಾಡುವ ಭಾಗ್ಯ ಬಂದಿದೆ ಎಂದರು.ಚಿತ್ರದುರ್ಗದಿಂದ ಹೋಗುತ್ತಿರುವ 415 ರಾಮ ಭಕ್ತಾಧಿಗಳಿಗೆ ರಾಮನ ದರ್ಶನವಾಗುತ್ತದೆ. ರಾಮಮಂದಿರ ನಿರ್ಮಾಣಕ್ಕಾಗಿ ಅನೇಕರು ಹೋರಾಟ ಮಾಡಿದ್ದಾರೆ. ಹಲವಾರು ಜನತೆ ತಮ್ಮ ಪ್ರಾಣ ನೀಡಿದ್ದಾರೆ.
Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ
ರಾಮರಾಜ್ಯದ ಕನಸು ಸಾಕಾರಗೊಳ್ಳಬೇಕಾದರೆ ರಾಮಮಂದಿರ ನಿರ್ಮಾಣವಾಗಬೇಕಿತ್ತೆಂಬುದು ಮೋದಿಯವರ ಕನಸಾಗಿತ್ತು. ಅದೀಗ ಈಡೇರಿದೆ. ದೇಶದಲ್ಲಿ ಸಂವಿಧಾನ ಎಷ್ಟು ಮುಖ್ಯವೂ ಅಷ್ಟೇ ಪ್ರಮಾಣದಲ್ಲಿ ರಾಮಾಯಣ ಮತ್ತು ಮಹಾಭಾರತ ಬಹು ಸಂಖ್ಯಾತ ಹಿಂದೂಗಳಿಗೆ ಅವಶ್ಯ ಜೀವನ ಪದ್ಧತಿಯಾಗಿದೆ. ರಾಮಮಂದಿರ ನಿರ್ಮಾಣದ 500 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಇದ್ಕಕಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.