ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಮನೆಗೆ ನುಗ್ಗಿ ಹತ್ಯೆ ಮಾಡಿದ ಹಿನ್ನೆಲೆಯಲ್ಲಿ, ಈಡಿ ರಾಜ್ಯಾದ್ಯಂತ ಸದ್ದು ಮಾಡಿತ್ತು. ಅಂಜಲಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಮಾಡುತ್ತೇವೆಂದು ಒಪ್ಪಿದ್ದು, ಮಾತಿನಂತೆ ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂಜಲಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಚೆಕ್ ನೀಡಿದರು.
ಹೌದು,,,, ಮೇ 15 ರಂದು ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ ಎಂಬ ಯುವತಿಯನ್ನು ವಿಶ್ವ ಅಲಿಯಾಸ ಗಿರೀಶ್ ಎಂಬ ಯುವಕ ಬೆಳ್ಳಂ ಬೆಳಗ್ಗೆ ಅಂಜಲಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಪೊಲೀಸರು ಆತನನ್ನು ಅರೆಸ್ಟ್ ಮಾಡಿ ತನಿಖೆ ಮಾಡಿದಾಗ ಗೊತ್ತಾಯ್ತು ಪ್ರೀತಿ ನಿರಾಕರಿಸಿದಕ್ಕೆ ಅಂಜಲಿಯನ್ನು ಕೊಲೆ ಮಾಡಿದ್ದ ಎಂಬುದು. ಇದು ಇಡೀ ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿ ಮಾಡಿತ್ತು.
Stop Eating Rice: ಒಂದು ತಿಂಗಳು ಅನ್ನ ಸೇವಿಸದಿದ್ದರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ..?
ಈ ಘಟನೆ ನೇಹಾ ಹಿರೇಮಠ ಹತ್ಯೆಯಾದ ಒಂದೇ ತಿಂಗಳಲ್ಲಿ ಅಂಜಲಿ ಕೊಲೆಯಾಗಿತ್ತು. ಇವೆರೆಡು ಘಟನೆ ಹುಬ್ಬಳ್ಳಿಯಲ್ಲಿ ಭಯದ ವಾತಾವರಣ ಮೂಡಿಸಿದ್ದವು. ಕುಟುಂಬಕ್ಕೆ ಆಸರೆಯಾಗಿದ್ದ ಅಂಜಲಿ ಕೊಲೆಯಾದಳು, ಮನೆಗೆ ಯಾರು ದಿಕ್ಕವಿಲ್ಲದಂತಾಯಿತು. ಅಂಬಿಗ ಸಮುದಾಯ ಈ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಒತ್ತಾಯ ಮಾಡಿತ್ತು, ಅದೇ ರೀತಿ ಅಂಜಲಿ ಮನೆಗೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಭೇಟಿ ಸಾಂತ್ವನ ಕೂಡ ಹೇಳಿದ್ದರು. ಅದೇ ರೀತಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ತಹಶೀಲ್ದಾರ ಕಲ್ಲಗೌಡ ಪಾಟೀಲ್ ಅವರು ಅಂಜಲಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಚೆಕ್ ನೀಡಿದರು.