ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಅಂಬಲಗೆರೆ ಗ್ರಾಮದಲ್ಲಿ ಬೇಲಿಯ ಮೇಲೆ ಬೆಳೆದಿದ್ದ ವಿಷದ ಕಾಯಿ ತಿಂದು 6 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಆಟವಾಡುತ್ತಾ ಮಕ್ಕಳು ವಿಷದ ಕಾಯಿ ತಿಂದಿದ್ದಾರೆ. ಪರಿಣಾಮ 6 ಜನ ಮಕ್ಕಳು ಅಸ್ವಸ್ಥರಾಗಿದ್ದಾರೆ. ಪ್ರಕೃತಿ, ಮುಖೇಶ್, ಅನುಶ್ರೀ, ರಾಕೇಶ್, ಸಿಂಧು, ಮಹಾಲಕ್ಷ್ಮಿ ಅಸ್ವಸ್ಥ ಮಕ್ಕಳು.
ಬೆನ್ನು ನೋವು ಪ್ರಾಣ ಹಿಂಡುತ್ತಿದೆಯೇ..? ಇಲ್ಲಿದೆ ನೋಡಿ ಮುಕ್ತಿ ಹೊಂದಲು ಪರಿಹಾರ
ಕಾಯಿ ತಿನ್ನುತ್ತಿದ್ದಂತೆ ಮಕ್ಕಳಲ್ಲಿ ವಾಂತಿ, ಬೇಧಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಬಳಿಕ ಅಸ್ವಸ್ಥಗೊಂಡ ಮಕ್ಕಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.