ಲಕ್ನೋ ಸೂಪರ್ ಜೈಂಟ್ಸ್ ತಂಡದ ಉಪನಾಯಕ ನಿಕೋಲಸ್ ಪೂರನ್ ಅವರು RCB ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ಹರಿಯಾಣದಲ್ಲಿ ನಿರುದ್ಯೋಗ ಸೃಷ್ಟಿಗೆ ಆ ಬಿಜೆಪಿ ಕಾರಣ – ಪ್ರಿಯಾಂಕ ಗಾಂಧಿ..!
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ 2ನೇ ಕ್ವಾಲಿಫೈಯರ್ಗೆ ಅರ್ಹತೆ ಪಡೆದುಕೊಂಡಿದೆ. ಈ ಸೋಲಿನೊಂದಿಗೆ ಆರ್ಸಿಬಿ ಐಪಿಎಲ್ನಿಂದ ಹೊರಬಿದ್ದಿದೆ.
ಈ ಸೋಲಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಚ್ಚೆದೆಯ ಪ್ರದರ್ಶನಕ್ಕೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಉಪನಾಯಕ ನಿಕೋಲಸ್ ಪೂರನ್ ಆರ್ಸಿಬಿ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ಬಾರಿಯ ಐಪಿಎಲ್ನ ಮೊದಲ 8 ಪಂದ್ಯಗಳಲ್ಲಿ ಆರ್ಸಿಬಿ ತಂಡ ಗೆದ್ದಿದ್ದು ಕೇವಲ 1 ಮ್ಯಾಚ್ ಮಾತ್ರ. ಒಂದಾರ್ಥದಲ್ಲಿ ಮೊದಲಾರ್ಧದ ಮುಕ್ತಾಯದ ಬೆನ್ನಲ್ಲೇ ಆರ್ಸಿಬಿ ತಂಡ ಪ್ಲೇಆಫ್ನಿಂದ ಹೊರಬೀಳುವುದು ಖಚಿತವಾಗಿತ್ತು. ಆದರೆ ದ್ವಿತೀಯಾರ್ಧದಲ್ಲಿ ಕಂಬ್ಯಾಕ್ ಮಾಡಿದ ಆರ್ಸಿಬಿ, ಕೊನೆಯ 6 ಪಂದ್ಯಗಳಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿತು. ಅಲ್ಲದೆ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಪ್ಲೇಆಫ್ ಪ್ರವೇಶಿಸಿತ್ತು. ಇಂತಹದೊಂದು ಅದ್ಭುತ ಪ್ರದರ್ಶನ ನೀಡಿದ ಆರ್ಸಿಬಿ ತಂಡವನ್ನು ಪೂರನ್ ಕೊಂಡಾಡಿದ್ದಾರೆ
ಒಂದು ಸಣ್ಣ ನಂಬಿಕೆಯು ಏನು ಮಾಡಬಲ್ಲದು ಎಂಬುದನ್ನು ತೋರಿಸಿಕೊಟ್ಟಿದ್ದಕ್ಕಾಗಿ ಆರ್ಸಿಬಿ ತಂಡಕ್ಕೆ ಧನ್ಯವಾದಗಳು ಎಂದು ನಿಕೋಲಸ್ ಪೂರನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಪ್ಲೇಆಫ್ ಪ್ರವೇಶಿಸಲು ಕೇವಲ 1 ಪರ್ಸೆಂಟ್ನಷ್ಟು ಮಾತ್ರ ಅವಕಾಶ ಹೊಂದಿದ್ದ ಆರ್ಸಿಬಿ ತಂಡವು ಯಾವುದು ಕೂಡ ಅಸಾಧ್ಯವಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ಇಂತಹ ಅದ್ಭುತ ಪ್ರದರ್ಶನದೊಂದಿಗೆ ಎಲ್ಲರಲ್ಲೂ ಹೊಸ ವಿಶ್ವಾಸ ಮೂಡಿಸಿರುವ ಆರ್ಸಿಬಿ ತಂಡಕ್ಕೆ ಪೂರನ್ ಧನ್ಯವಾದ ತಿಳಿಸಿರುವುದು ವಿಶೇಷ.