ಕನ್ನಡ ಸಾಹಿತ್ಯ ಪರಿಷತ್ ಗದಗ ತಾಲೂಕಾ ಘಟಕ ಹಾಗೂ ಮಹಾಂತ ಕಲಾ ಬಳಗದ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ಟ್ಯಾಗೋರ್ ರಸ್ತೆಯ 2 ನೇ ಕ್ರಾಸ್ ನಲ್ಲಿರುವ ಶ್ರೀ ಮಹಾಂತೇಶ್ವರ ದೇವಾಲಯದ ಆವರಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮ -50 ರ ಸರಣಿ ಕಾರ್ಯಕ್ರಮದ ಮೊದಲ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮಹಿಳೆಯರಿಂದ ಜ್ಯೋತಿ ಬೆಳಗಿಸೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ಏಕೀಕರಣ ಮತ್ತು ನಾಮಕರಣ ಹೋರಾಟದ ಕುರಿತಾಗಿ ಜೆಸಿ ಪ್ರೌಢ ಶಾಲೆಯ ಶಿಕ್ಷಕಿ ಜ್ಯೋತಿ ಹೇರಲಗಿ ಉಪನ್ಯಾಸವನ್ನು ನೀಡಿದ್ರು. ಕನ್ನಡ ನಾಡು, ನುಡಿ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ತಾಲೂಕಾ ಘಟಕದ ಅಧ್ಯಕ್ಷೆ ಡಾ. ರಶ್ಮಿ ಅಂಗಡಿ ಅವರು ಮಾತನಾಡಿದ್ರು. ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಣ ಸಮಿತಿ ಕಾಲೇಜಿನ ಉಪನ್ಯಾಸಕರಾದ ಬಾಹುಬಲಿ ಜೈನರ್ ಸೇರಿದಂತೆ ಟ್ಯಾಗೋರ್ ರಸ್ತೆಯ ಹಿರಿಯರಿಗೆ ಸನ್ಮಾನಿಸಲಾಯಿತು. ಇನ್ನು ಚಿಣ್ಣರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ನೀಡಲಾಯಿತು.