ಚೆನ್ನೈ: ತಮಿಳುನಾಡು ಸಚಿವ ಮತ್ತು ಡಿಎಂಕೆ (DMK) ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಸೋಮವಾರ ‘ಸನಾತನ ಧರ್ಮ’ ಕುರಿತು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ಉದಯನಿಧಿ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮವನ್ನು (Sanatana Dharma) ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು.
ಸನಾತನ ಧರ್ಮದ ಕುರಿತು ಮತ್ತೆ ಮಾತನಾಡಿರುವ ಸಿಎಂ ಸ್ಟಾಲಿನ್ ಪುತ್ರ, ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ನಾನು ಎಂಎಲ್ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ. ನಾವು ಹಲವಾರು ವರ್ಷಗಳಿಂದ ಸನಾತನದ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ ನೀಟ್ ಆರು ವರ್ಷಗಳ ಹಿಂದಿನ ಸಮಸ್ಯೆಯಾಗಿದೆ. ಇದು (ಸನಾತನ) ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.