ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿರುವ ಶ್ರೀ ಸಮರ್ಥ ಸದ್ಗುರು ಮಾಧವಾನಂದ ಪ್ರಭೂಜಿಯವರ ಆಶ್ರಮ ( ಶ್ರೀ ಮೋರ್ತೇಪ್ಪ ಕಲ್ಲಪ್ಫ ಹೂಗಾರ ತೋಟದ ಆವರಣ ) ದಲ್ಲಿ ಶ್ರೀ ಸಮರ್ಥ ಸದ್ಗುರು ಮಾಧವಾನಂದ ಪ್ರಭೂಜಿಯವರ 108 ನೇ ಜನ್ಮೋತ್ಸವ ಹಾಗೂ ಶ್ರೀ ಸಮರ್ಥ ಸದ್ಗುರು ಶಿವಪ್ರಭು ಮಹಾರಾಜರ ಪರಮ ಶಿಷ್ಯರಾದ ಶ್ರೀ ಕಲ್ಲಪ್ಫ. ಮೋ. ಹೂಗಾರ ಮಹಾರಾಜರ ಇವರ ಪುಣ್ಯ ಸ್ಮರಣೋತ್ಸವ ಆಧ್ಯಾತ್ಮ ಸಪ್ತಾಹ ಬುಧವಾರ ದಿನಾಂಕ 08 ನವೆಂಬರ 2023 ರಂದು ಬೆಳಿಗ್ಗೆ 10=00 ಗಂಟೆಗೆ ಶ್ರೀ ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರ ದಿವ್ಯ ಸಾನ್ನಿಧ್ಯದಲ್ಲಿ ಜರಗುವದು.
ಈ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಭಜನೆ. ದಾಸಬೋದ ಪಠಣ .ಪುರಾಣ. ಪ್ರವಚನ. ಶ್ರೀ ಸಮರ್ಥ ಸದ್ಗುರು ಮಾಧವಾನಂದ ಪ್ರಭೂಜಿಯವರ ತೊಟ್ಟಿಲೋತ್ಸವ. ಶ್ರೀ ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರ ಆಶಿರ್ವಚನ ಹಾಗೂ ಪುಷ್ಪ ವೃಷ್ಠಿಯೊಂದಿಗೆ ಮಂಗಲಗೊಳ್ಳುವದು ಅತ್ಯಂತ ವಿಜೃಂಭಣೆಯಿಂದ ಜರಗುವ ಈ ಆಧ್ಯಾತ್ಮ ಕಾರ್ಯಕ್ರಮದಲ್ಲಿ ಸರ್ವ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸದ್ಗುರುಗಳ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ
ಪ್ರಕಾಶ ಕುಂಬಾರ