ಹಾಸನ: ರಾಜ್ಯ ಸರಕಾರವು ಮೊದಲು ಕಚ್ಚಾಟ ನಿಲ್ಲಿಸಿ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಕೊಡಬೇಕು. ಇಲ್ಲವಾದರೇ ರೈತರು ಬೀದಿಗಿಳಿದು ಹೋರಾಟ ಮಾಡುವ ಮೊದಲೆ ಎಚ್ಚೆತ್ತುಕೊಳ್ಳಿ ಎಂದು ಲೋಕಾಸಭಾ ಸದಸ್ಯರಾದ ಡಿ.ವಿ. ಸದಾನಂದಗೌಡ ಸಲಹೆ ನೀಡಿ ಎಚ್ಚರಿಸಿದರು. ಹಾಸನ ಜಿಲ್ಲೆಯಲ್ಲಿ ಬರ ವಿಕ್ಷಣೆ ಮಾಡಿ ಅಧ್ಯಯನ ಮುಗಿಸಿದ ನಂತರ ನಗರದ ಖಾಸಗೀಹೋಟೆಲೊಂದರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಜನರ ಬೇಡಿಕೆ ಈಡೇರಿಸಲು ಆಗುತ್ತಿಲ್ಲ. ಒಬ್ಬ ಸಿಎಂ ಅಧಿಕಾರಿಗಳ ಸಭೆಯಲ್ಲಿ ಹೇಳಿದರೂ ಯಾವುದೇ ವಿಷಯಗಳಿಗೆ ಕಿಮ್ಮತ್ತಿಲ್ಲ.
ಶೇಕಡ ೮೦ ರಷ್ಟು ಬೆಳೆ ಹಾನಿ ಆಗಿದೆ. ಬರ ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರದ ಯಾವ ಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಹಾಸನ ಜಿಲ್ಲೆಗೆ ಬರಪರಿಹಾರದ ಹಣ ೧೨ ಕೋಟಿ ರೂ ರಿಲೀಸ್ ಆಗಿದೆ. ಆದ್ರೆ ಜಿಲ್ಲಾಡಳಿತಕ್ಕೆ ಸರ್ಕಾರ ಸರಿಯಾಗಿ ಮಾರ್ಗದರ್ಶನ ನೀಡದ ಹಿನ್ನೆಲೆ ಅನುದಾನ ಪ್ರಯೋಜನ ಆಗುತ್ತಿಲ್ಲ. ಕನಿಷ್ಠ ಕಾಳಜಿಯಾದರೂ ಸರ್ಕಾರಕ್ಕೆ ಬೇಕು ಎಂದರು.ರೈತರ ಆತ್ಮಹತ್ಯೆ, ಹಾವು ಕಚ್ಚಿ ಸತ್ತವರಿಗೆ ರಾಜ್ಯ ಸರ್ಕಾರ ಈ ವರಗೆ ಪರಿಹಾರ ಕೊಟ್ಟಿಲ್ಲ. ರಾಜ್ಯದಲ್ಲಿ ಎರಡೂವರೆ ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಮೇವು ಸಂಗ್ರಹ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಬರದ ಸಮಸ್ಯೆ ನಿವಾರಣೆ ಮಾಡುವ ಸಂಬದ ಸರ್ಕಾರ ಪೂರ್ವತಯಾರಿ ಮಾಡಿಕೊಳ್ಳಬೇಕಿತ್ತು. ನವಂಬರ್ ೧೦ನೇ ತಾರೀಖಿಗೆ ನಾವು ವರದಿ ಸಲ್ಲಿಸುತ್ತೇವೆ. ಪ್ರಚಾರಕ್ಕಾಗಿ ಬರ ಅಧ್ಯಯನ ಮಾಡುತ್ತಿಲ್ಲ. ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ಈ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ನಾಲ್ಕು ತಿಂಗಳಲ್ಲಿ ಆಡಳಿತ ವೈಫಲ್ಯ ಆಗಿದೆ. ಸರ್ಕಾರ ರಾಜಕೀಯ ಕಚ್ಚಾಟ ನಿಲ್ಲಿಸಿ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಕೊಡಬೇಕು
ಬರ ಪರಿಹಾರಕ್ಕಾಗಿ ಕೇಂದ್ರದ ಬಳಿ ಹೊಗೋಣ ಬನ್ನಿ, ನಾವು ಬರುತ್ತೇವೆ ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು. ರಾಜ್ಯ ಸರ್ಕಾರ. ರೈತರು ಬೀದಿಗೆ ಇಳಿಯುವ ಮೊದಲು ಎಚ್ಚೆತ್ತುಕೊಳ್ಳಬೇಕು. ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ ಬ್ರ್ಯಾಂಡ್ ಬೆಂಗಳೂರು ಅಂತಾರೆ. ಆದ್ರೆ ಕುಡಿಯುವ ನೀರಿಗೆ ಪರಿಹಾರ ಕಂಡುಕೊಂಡಿಲ್ಲ. ಬಿಜೆಪಿ ರೈತರ ಪರ ಕೆಲಸ ಮಾಡುತ್ತದೆ ಎಂಬ ಸಂದೇಶವನ್ನು ರಾಜ್ಯದ ಜನತೆಗೆ ನೀಡುತ್ತೆವೆ ಎಂದು ಹೇಳಿದರು.