ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ಕೂಡ ಹೊಸ ನಿಯಮಗಳು ಜಾರಿಯಾಗಿವೆ. ಇತ್ತೀಚಿಗೆ ನಿರ್ಮಲ ಸೀತಾರಾಮನ್ ಅವರು ತೆರಿಗೆ ಪಾವತಿಯಲ್ಲಿ ಅನೇಕ ವಿನಾಯಿತಿಯನ್ನು ನೀಡುತ್ತಿದ್ದಾರೆ. ಭಾರತದಲ್ಲಿ ಹಲವು ಆದಾಯಗಳಿಗೆ ತೆರಿಗೆ ಇಲ್ಲ ಅನ್ನುವ ಮಾಹಿತಿ ಇನ್ನೂ ಕೂಡ ಸಾಕಷ್ಟು ಜನರಿಗೆ ತಿಳಿದಿಲ್ಲ ಎಂದು ಹೇಳಬಹುದು.
ವ್ಯಾಪಾರ ಅಥವಾ ಉದ್ಯೋಗದಿಂದ ಬಂದ ಆದಾಯದ ಮೂಲಗಳಿಗೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ .ಆದರೆ ಕೆಲವು ತೆರಿಗೆ ವಿಧಿಸದ ಗಳಿಕೆಗಳಿವೆ. ಇಲಾಖೆಯು ಕೆಲ ಮೂಲದ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ನೀಡುತ್ತದೆ. ಇದೀಗ ಯಾವ ಆದಾಯಕ್ಕೆ ತೆರಿಗೆ ಪಾವತಿಸುವ ಅಗತ್ಯ ಇರುವುದಿಲ್ಲ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.
ಇನ್ನುಮುಂದೆ ಈ 5 ಆದಾಯಗಳಿಗೆ ತೆರಿಗೆ ಕಟ್ಟುವ ಅಗತ್ಯ ಇಲ್ಲ
ಕೃಷಿ ಮೇಲಿನ ಆದಾಯ
ಭಾರತ ಕೃಷಿ ಪ್ರಧಾನ ದೇಶವಾಗಿದೆ. ಕೃಷಿ ಚಟುವಟಿಕೆಗಳಿಂದ ಗಳಿಸಿದ ಆದಾಯವು ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 10(1) ಅಡಿಯಲ್ಲಿ ಆದಾಯ ತೆರಿಗೆಯಿಂದ ಮುಕ್ತವಾಗಿದೆ. ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕೃಷಿ ಕ್ಷೇತ್ರವನ್ನು ಬೆಂಬಲಿಸುವುದು ಮತ್ತು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಭಾರತದಲ್ಲಿ ಉಡುಗೊರೆಗಳನ್ನು ತೆಗೆದುಕೊಳ್ಳುದು ಹಾಗೂ ನೀಡುವುದು ಪದ್ಧತಿಯಾಗಿದೆ. ವ್ಯಕ್ತಿಗಳು ಸ್ವೀಕರಿಸುವ ಉಡುಗೊರೆಗಳು ಸಾಮಾನ್ಯವಾಗಿ ತೆರಿಗೆ ಮುಕ್ತವಾಗಿರುತ್ತದೆ. ಹಾಗೆ ಪಿತ್ರಾರ್ಜಿತ ಆಸ್ತಿ ಆದಾಯ ತೆರಿಗೆಗೆ ಒಳಪಡುವುದಿಲ್ಲ ಉಡುಗೊರೆಗಳು ಮತ್ತು ಉತ್ತರಾಧಿಕಾರಗಳ ಮೇಲೆ ತೆರಿಗೆ ವಿಧಿಸುವುದರಿಂದ ಕುಟುಂಬದ ಆರ್ಥಿಕ ಬೆಂಬಲ ಹೆಚ್ಚಾಗುವುದಿಲ್ಲ ಮತ್ತು ತಲೆಮಾರುಗಳ ನಡುವೆ ಹಣ ವರ್ಗಾವಣೆಗೆ ಅಡ್ಡಿಯಾಗುವುದರಿಂದ ಈ ವಿನಾಯಿತಿ ನೀಡಲಾಗಿದೆ.
ಸಾರ್ವಜನಿಕ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಭವಿಷ್ಯ ನಿಧಿಯ ಹೂಡಿಕೆ ಮೇಲೆ ಗಳಿಸಿದ ಬಡ್ಡಿ ತೆರಿಗೆ ಮುಕ್ತವಾಗಿರುತ್ತದೆ. ದೀರ್ಘಾವಧಿಯ ಉಳಿತಾಯ ಮತ್ತು ಆರ್ಥಿಕ ಭದ್ರತೆಯನ್ನು ನೀಡುವ ಈ ಹೂಡಿಕೆಗಳನ್ನು ಉತ್ತೇಜಿಸಲಾಗುತ್ತದೆ. ಗಳಿಸಿದ ಬಡ್ಡಿಯ ಮೇಲೆ ತೆರಿಗೆ ವಿನಾಯಿತಿ ನೀಡುವ ಮೂಲಕ ಈ ಯೋಜನೆಗಳಿಗೆ ಕೊಡುಗೆ ನೀಡುವಂತೆ ಸರ್ಕಾರವು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ.
ದೀರ್ಘಾವಧಿಯ ಹೂಡಿಕೆಯಲ್ಲಿನ ಲಾಭ
ಈಕ್ವಿಟಿ ಷೇರುಗಳು ಮತ್ತು ಮ್ಯೂಚುವಲ್ ಫಂಡ್ ಗಳಂತಹ ಕೆಲವು ಆಸ್ತಿಗಳ ಮಾರಾಟದಿಂದ ಬರುವ ದೀರ್ಘಾವಧಿಯ ಬಂಡವಾಳ ಲಾಭಗಳು ಕೆಲವು ಮಾನದಂಡಗಳನ್ನು ಪೂರೈಸಿದರೆ ಅವು ತೆರಿಗೆ ಮುಕ್ತವಾಗಿರುತ್ತವೆ. ಈ ವಿನಾಯಿತಿಯನ್ನು ನೀಡುವ ಮೂಲಕ ಬಂಡವಾಳ ಮಾರುಕಟ್ಟೆಯಲ್ಲಿ ದೀರ್ಘಾವಧಿಯ ಹೂಡಿಕೆಯನ್ನು ಪ್ರೋತ್ಸಹಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಆದರೆ ಅಲ್ಪಾವಧಿಯ ಬಂಡವಾಳ ಲಾಭದ ಮೇಲೆ ತೆರಿಗೆ ಪಾವತಿಸಬೇಕಾಗುತ್ತದೆ.
ಮನೆ ಬಾಡಿಗೆ ಭತ್ಯೆ
ಮನೆ ಬಾಡಿಗೆ ಭತ್ಯೆ ತೆರಿಗೆ ಮುಕ್ತವಾಗಿದೆ. ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ಈ ವಿನಾಯಿತಿಯ ಹಿಂದಿನ ಉದ್ದೇಶವಾಗಿದೆ.