ಬೆಂಗಳೂರು:- ರಾಜ್ಯಾಧ್ಯಕ್ಷರ ಸ್ಥಾನಕ್ಕೆ ವಿಜಯೇಂದ್ರರ ಆಯ್ಕೆ ಪಕ್ಷಕ್ಕೆ ಶಕ್ತಿ ತುಂಬಿದೆ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ವಿಜಯೇಂದ್ರರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವುದಕ್ಕೆ ರೇಣುಕಾಚಾರ್ಯರ ಕೂಗಲ್ಲ. ಈ ನಾಡಿನ ಪ್ರಜ್ಞಾವಂತರ ಅಪೇಕ್ಷೆಯಾಗಿತ್ತು. ಜನರ ಅಪೇಕ್ಷೆ ಈಡೇರಿಸಿದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾರ್ಯ ಅಭಿವಂದನೆಗಳು ತಿಳಿಸಿದರು.
ವಿಜಯೇಂದ್ರರ ಪಕ್ಷ ಸಂಘಟನೆ ಸಾಮರ್ಥ್ಯ ನೋಡಿ ಈ ಹುದ್ದೆ ಸಿಕ್ಕಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಜಯೇಂದ್ರರ ಆಯ್ಕೆ ಪಕ್ಷಕ್ಕೆ ಶಕ್ತಿ ತುಂಬಿದೆ. ಇದು ಮಾಸ್ಟರ್ ಸ್ಟ್ರೋಕ್ ಎಂದರು.
ಯಡಿಯುರಪ್ಪ ಅವರನ್ನ ಬೆಳಗ್ಗೆ ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿ ಹೊರಟಿದ್ದೆ. ಇಂದು ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗ್ತಿದ್ದಂತೆ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವ ಮೂಲಕ ಸಂಭ್ರಮಾಚರಣೆ ಮಾಡ್ತಿದ್ದಾರೆ ಎಂದರು.
ಮುಂದೆ ಲೋಕಸಭಾ ಚುನಾವಣೆ ಬರ್ತಿದೆ. ಸಂಘಟನೆ ಚತುರ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರರ ಸಂಘಟನೆ ನೋಡಿ ಅವರಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟಿದ್ದಾರೆ. ನಾಳೆ ವಿಜಯೋತ್ಸವ ಆಚರಣೆ ಮಾಡುವಂತೆ ಮನವಿ ಮಾಡುತ್ತೇವೆ ಎಂದರು.