ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ (Deepavali) ಅಂದರೆ ಸಡಗರ ಸಂಭ್ರಮ ಮನೆ ಮಾಡಿರುತ್ತೆ. ಆದರೆ ಜನರ ಬಾಳಲ್ಲಿ ಬೆಳಕಾಗಬೇಕಾಗಿದ್ದ ಇದೇ ದೀಪಾವಳಿ ಹಬ್ಬ ಕೆಲವರ ಬಾಳನ್ನ ಕತ್ತಲಾಗಿಸುತ್ತಿದೆ. ಪ್ರತಿ ವರ್ಷದ ಹಾಗೇ ಈ ಬಾರಿ ಕೂಡ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಲ್ಲಿ ಪಟಾಕಿ ಸಿಡಿದು ನಿನ್ನೆ ಒಂದೇ ದಿನ 13 ಜನರಿಗೆ ಗಾಯಗಳಾಗಿವೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಭಾನುವಾರದಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ. ಶ್ರೀರಾಂಪುರದಲ್ಲಿ 18 ವರ್ಷದ ಯುವಕ ಭಾನುವಾರ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು ಆತನ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಧರ್ಮಾವರಂನ 10 ವರ್ಷದ ಬಾಲಕಿ ಮತ್ತು ಬೆಂಗಳೂರಿನ 22 ವರ್ಷದ ಯುವಕಿಗೂ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಇದರಿಂದಾಗಿ ಅವರಿಗೆ ದೃಷ್ಟಿ ಸಮಸ್ಯೆ ಎದುರಾಗಿದೆ.
ಮಿಂಟೋ ಆಸ್ಪತ್ರೆಯ ನಿರ್ದೇಶಕ ಜಿ.ನಾಗರಾಜು ಮಾತನಾಡಿ, ಮೂವರಿಗೂ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದೀರ್ಘಾವಧಿ ಚಿಕಿತ್ಸೆ ಅಗತ್ಯವಿದೆ. ಸೋಮವಾರ ಸಂಜೆಯವರೆಗೆ ಮಿಂಟೋದಲ್ಲಿ ಒಟ್ಟು ಒಂಬತ್ತು ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನವೆಂಬರ್ 12 ರಂದು ಬಿಹಾರದಲ್ಲಿ ಬಿಹಾರಿ ಕುಟುಂಬ ಮೂಲದ ಆರು ವರ್ಷದ ಬಾಲಕ ಕೂಡ ಪಟಾಕಿ ಸಿಡಿಸಿ ಗಾಯಗೊಂಡಿದ್ದು ಬಾಲಕನಿಗೆ ಸ್ಥಳೀಯ ಚಿಕಿತ್ಸಾಲಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಅವನನ್ನು ನಾರಾಯಣ ನೇತ್ರಾಲಯಕ್ಕೆ ಶಿಫ್ಟ್ ಮಾಡಲಾಗಿದೆ ಎಂದರು.