ಬೆಂಗಳೂರು:- ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಗೆ ಬೆಂಕಿ ತಗುಲಿದ ಘಟನೆ ರಾಜ್ ಕುಮಾರ್ ಸಮಾಧಿ ಬಳಿ ಜರುಗಿದೆ.
ಬೆಂಕಿಗೆ ಕೆನ್ನಾಲಿಗೆಗೆ ಬ್ರಹ್ಮಶ್ರೀ ಸ್ವೀಟ್ಸ್ ಅಂಡ್ ಕಾಂಡಿಮೆಂಟ್ಸ್ ಆಹುತಿಯಾಗಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆ ಸಿಲಿಂಡರ್ ಅನ್ನು ಸಿಬ್ಬಂದಿ ಹೊರ ತಂದಿದ್ದು, ಆದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಇಲ್ಲ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ವಾಹನ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೇಕರಿಯಲ್ಲಿದ್ದ ವಸ್ತುಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದು ಬಂದಿದೆ.