ಕೊಪ್ಪಳ:- ವಿಜಯೇಂದ್ರ ನೆಮ್ಮದಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡಲ್ಲ ಎಂದು ಸಚಿವ ತಂಗಡಗಿ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ; ಅಸಮಾಧಾನವಿದೆ. ನೆಮ್ಮದಿಯಾಗಿ ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವರ ಪಕ್ಷದವರೇ ಬಿಡುವುದಿಲ್ಲ. ಕಾಂಗ್ರೆಸ್ಸಿನವರು ಅಪಹಾಸ್ಯ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ಸಿಗೆ ಕುಟುಂಬ ರಾಜಕಾರಣ ಅಂತ ಬಿಜೆಪಿಯವರು ಹೇಳುತ್ತಾರೆ. ಆದರೆ ಈಗ ಏನಾಗಿದೆ? ಬಿಜೆಪಿಯವರು ಯಡಿಯೂರಪ್ಪ ಹೆಸರನ್ನು ಹೇಳಿಕೊಂಡು ಹೊರಟಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ನೆಚ್ಚಿಕೊಂಡು ಬಿಜೆಪಿ, ಜೆಡಿಎಸ್ನಿಂದ ಕಾಂಗ್ರೆಸ್ಸಿಗೆ ಹಲವಾರು ಜನರು ಬರುತ್ತಿದ್ದಾರೆ. ಹಂತ ಹಂತವಾಗಿ ಎಲ್ಲ ಹೇಳುವೆ ಎಂದರು. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದ ವಿಚಾರವಾಗಿ, ಅವರು ದಂಡ ಕಟ್ಟುವುದಾಗಿ ಒಪ್ಪಿಕೊಂಡಿದ್ದಾರೆ. ಕರೆಂಟ್ ಕದ್ದಿರುವುದನ್ನು ಮಾಧ್ಯಮದವರು ತೋರಿಸಿದ್ದಾರೆ. ಜೆಡಿಎಸ್, ಬಿಜೆಪಿಯವರು ಹತಾಶೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಸೂಚಿಸುತ್ತೇನೆ ಎಂದರು.