ಧಾರವಾಡ : ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕನ್ನಡಪ್ರಭ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥ ಮಲ್ಲಿಕಾರ್ಜುನ ಸಿದ್ದನಣ್ಣವರ ಭಾಗವಹಿಸಿ ಮಾತನಾಡಿ, ಪತ್ರಿಕೋದ್ಯಮ ಮೌಲ್ಯಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು, ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಸುದ್ದಿ ಜನರಿಗೆ ತಲುಪಿಸುತ್ತವೆ.
ಆದರೆ ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆಯನ್ನು ಪ್ರತಿಪಾದಿಸಿ ಜನ ಮನ್ನಣೆ ಪಡೆದುಕೊಂಡಿವೆ. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಧಾರವಾಡ ಜಿಲ್ಲಾ ವರದಿಗಾರ ಜಾವೇದ್ ಅಧೋನಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸವಾಲುಗಳು ಬಹಳಷ್ಟಿದೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಎಲ್ಲವನ್ನೂ ಧನಾತ್ಮಕವಾಗಿ ಪರಿಗಣಿಸಬೇಕು ಸುದ್ದಿಗಳಿಗೆ ಹೊಸ ರೂಪ ನೀಡುವ ಜೊತೆಗೆ ಜನರಿಗೆ ಮುಟ್ಟುವಂತೆ ಸುದ್ದಿ ಮಾಡುವ ಕಲೆಯನ್ನು ಯುವ ಪತ್ರಕರ್ತರು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಮ್ ಮಕಾಂದಾರ, ಐಕ್ಯೂಎಸ್ಸಿ ಕೋ ಆರ್ಡಿನೆಟರ್ ಎಂ.ಬಿ ನಲ್ವತ್ವಾಡ್, ಪತ್ರಿಕೋದ್ಯಮ ಮುಖ್ಯಸ್ಥ ಡಾ.ಎಸ್.ಎಸ್ ಅಧೋನಿ, ಉಪನ್ಯಾಸಕರಾದ ರೇಷ್ಮಾ ದೇಸಾಯಿ ಸೇರಿದಂತೆ ಹಲವರು ಇದ್ದರು.