ಬೆಂಗಳೂರು:- ಬೆಂಗಳೂರಿನ ಕಲೆ, ಸಂಸ್ಕೃತಿ, ಉಳಿಸುವ ಜವಬ್ದಾರಿ ಕನ್ನಡಿಗರದ್ದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಶಾಂತ್ ಪ್ರಕಾಶ್ ಹಾಗೂ ಮಾಲಿನಿ ಗೋಯಲ್ ಅವರು ಬರೆದಿರುವ ಪುಸ್ತಕವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರು ಹಬ್ಬದಂತಹ ಆಚರಣೆಗಳ ಮೂಲಕ ನಗರದ ಇತಿಹಾಸ, ಕಲೆ, ಸಂಸ್ಕೃತಿ , ಪರಂಪರೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು.
ಪ್ರಶಾಂತ್ ಪ್ರಕಾಶ್ ಹಾಗೂ ಶ್ರೀಮತಿ ಮಾಲಿನಿ ಗೋಯಲ್ ಅವರು ಬೆಂಗಳೂರು ಹಬ್ಬ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಪ್ರಶಾಂತ್ ಪ್ರಕಾಶ್ ಹಾಗೂ ಶ್ರೀಮತಿ ಮಾಲಿನಿ ಗೋಯಲ್ ಅವರು ಬರೆದಿರುವ Unboxing Bengaluru, The City of New Beginnings ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
‘ಬೆಂಗಳೂರು ಹಬ್ಬದಂತಹ ಹಬ್ಬಗಳ ಮೂಲಕ ಬೆಂಗಳೂರಿನ ಇತಿಹಾಸ, ಕಲೆ, ಸಂಸ್ಕೃತಿ , ಪರಂಪರೆಗಳನ್ನು… pic.twitter.com/nwj5pmG2Jk
— CM of Karnataka (@CMofKarnataka) November 16, 2023
ಬೆಂಗಳೂರು ಹಬ್ಬಕ್ಕೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಐತಿಹಾಸಿಕ ಮಹತ್ವವಿರುವ ಈ ನಗರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನಾಬದ್ಧವಾಗಿ ಬೆಳೆಸಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುಮಾರು ಒಂದೂವರೆ ಕೋಟಿ ಜನರಿದ್ದಾರೆ. ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಕೃತಿ, ಕಲೆ, ಜನಜೀವನ, ನಾಗರೀಕತೆಗಳನ್ನು ಉಳಿಸಿಕೊಂಡು ಬರಲಾಗಿದೆ. ನಗರದಲ್ಲಿ ಬಹಳ ಹಿಂದಿನಿಂದಲೂ ಕಡ್ಲೆಕಾಯಿ ಪರಿಷೆಯಂತಹ ಸಾಂಪ್ರದಾಯಿಕ ಆಚರಣೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದ್ದಾರೆ