ಬೆಂಗಳೂರು:– ಶೀಘ್ರವೇ 545 ಪಿಎಸ್ಐ ಹುದ್ದೆಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೆಇಎ ಸಂಸ್ಥೆಯಿಂದ ಪಿಎಸ್ಐ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದೇವೆ. ಆದೇಶ ಬಂದಿದೆ. ಇಂಡಿಪೆಂಡೆಂಟ್ ಏಜೆಸ್ಸಿಯಿಂದ ಆಗಲಿದೆ. 545 ಪಿಎಸ್ಐ ಹುದ್ದೆಗಳ ಪರೀಕ್ಷೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದಷ್ಟು ಬೇಗನೆ ಪರೀಕ್ಷೆ ಆಗಲಿದೆ ಎಂದು ಹೇಳಿದ್ದಾರೆ.
ಪಿಎಸ್ಐ ಕೇಸ್ ಮಾತ್ರವಲ್ಲದೆ ಅವರು ಅನೇಕ ಕೇಸ್ಗಳಲ್ಲಿಯೂ ಸಹ ಇದ್ದಾರೆ ಎನ್ನುವ ಮಾಹಿತಿ ಇದೆ. ಹೀಗಾಗಿ ಎಲ್ಲಾ ವಿಚಾರಗಳನ್ನು ಬಹಿರಂಗ ಮಾಡುವುದಕ್ಕೆ ಆಗುವುದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ತನಿಖೆ ಮಾಡುವುದಕ್ಕೆ ಆದೇಶ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಅದು ಬಿಜೆಪಿ ಆಂತರಿಕ ವಿಚಾರ, ಹೀಗಾಗಿ ಅದು ನಮಗೆ ಮುಖ್ಯವಲ್ಲ. ವಿಪಕ್ಷ ನಾಯಕರಾದವರು ಎಚ್ಚರಿಸಿಬಹುದು, ಸಲಹೆ ಕೊಡಬಹುದು. ಅದು ವಿಪಕ್ಷ ನಾಯಕ ಅಶೋಕ್ ಮತ್ತು ಅವರ ಪಕ್ಷದವರಿಗೆ ಬಿಟ್ಟಿದ್ದು. ವಿಪಕ್ಷ ನಾಯಕರಾದ ಆರ್.ಅಶೋಕ್ಗೆ ನಾನು ಸಹ ಅಭಿನಂದಿಸುತ್ತೇನೆ ಎಂದರು.