ದಾವಣಗೆರೆ: ಸ್ಪೀಕರ್ ಯು ಟಿ ಖಾದರ್ ಗೆ ಬಿಜೆಪಿಯ ಶಾಸಕರು ಕೈ ಮುಗಿದು ನಮಸ್ಕಾರ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಚಿವ ಜಮೀರ್ ಅಹ್ಮದ್ ರನ್ನು ಮುಲಾಜಿಲ್ಲದೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯ ಮಾಡಿದ್ದಾರೆ.
ನಗರದಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಜಮೀರ್ ನೀವು ರಾಜ್ಯದ ಸಚಿವರಾ? ಕೇವಲ ಅಲ್ಪ ಸಂಖ್ಯಾತರ ಸಚಿವರಾ..? ಈ ಬಗ್ಗೆ ಸಚಿವ ಜಮೀರ್ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಮುಲಾಜಿಲ್ಲದೇ ಅವರನ್ನ ಮುಖ್ಯಮಂತ್ರಿಗಳು ವಜಾ ಮಾಡಬೇಕು ಎಂದು ಒತ್ತಾಯ ಮಾಡಿದರು.
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
ಇನ್ನು, ಟೀ ಮಾರಿಕೊಂಡು ಜೀವನ ಮಾಡುತ್ತೇನೆಂಬ ಬಿಜೆಪಿ ಶಾಸಕ ಬಸನಗಡೌಡ ಪಾಟೀಲ್ ಯತ್ನಾಳ ಹೇಳಿಕೆಗೆ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿವೈ ವಿಜಯೇಂದ್ರರ ಆಯ್ಕೆಯನ್ನು ಸ್ವಾಗತ ಮಾಡಲಾಗಿದೆ. ಯತ್ನಾಳ ಜೊತೆ ಹಿರಿಯರು ಮಾತನಾಡುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರು ಒಟ್ಟಾಗಿ ಹೋಗುವುದು ಒಳ್ಳೆಯದು. ಈ ಬಗ್ಗೆ ನಾನೇನಾದರು ಮಾತಾಡಿದ್ರೆ ಯಡಿಯೂರಪ್ಪ ಹೇಳಿ ಹೇಳಿಕೆ ಕೊಡಿಸಿದ್ದಾರೆ ಅಂತಾರೆ. ಯಾವತ್ತು ಬಿ ಎಸ್ ಯಡಿಯೂರಪ್ಪ ಕೀಳುಮಟ್ಟದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದು ತಿಳಿಸಿದರು.