ಹುಬ್ಬಳ್ಳಿ; ಈಗಿನ ಎಲ್ಲ ಬೆಳವಣಿಗೆ ನೋಡಿದರೆ ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಇಷ್ಟು ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಆರಂಭವಾಗಿದ್ದು ಆಳಂದ ಶಾಸಕ ಬಿಆರ್ ಪಾಟಿಲ್ , ಕೊಪ್ಪಳ ಜಿಲ್ಲೆಯ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಸತೀಶ್ ಗುಂಪುಗಾರಿಕೆ ಈ ಎಲ್ಲಾ ಸಂಗತಿಗಳ ನೋಡಿದ್ರೆ ಎಷ್ಟು ಪ್ರಮಾಣದಲ್ಲಿ ಭಿನ್ನಾಭಿಪ್ರಾಯ ಇದೆ ಅಂತಾ ಗೊತ್ತಾಗುತ್ತದೆ ಎಂದ ಅವರು,
ರಾಷ್ಟ್ರೀಯ ನಾಯಕತ್ವದ ಬೆದರಿಕೆ ಇಲ್ಲ ಸರಿಮಾಡುವ , ಸಂಬಾಳಿಸುವ ನೇತೃತ್ವ ಇಲ್ಲ ಎನ್ನುವುದು ತೋರಿಸುತ್ತದೆ ಈಗ ಜಗಳ ಅತೀರೆಕಕ್ಕೆ ಹೋಗಿದೆ ಇದು ಆಡಳಿತ ಮೇಲೆ ಪರಿಣಾಮ ತೀವ್ರವಾಗಿ ಬೀರಿದೆ ಎಂದ ಅವರು, ಮುಖ್ಯ ಮಂತ್ರಿ ಮತ್ತು ಉಪ ಮುಖ್ಯ ಮಂತ್ರಿ ಗುಂಪುಗಳ ಮಧ್ಯೆ ಹೊಂದಾಣಿಕೆ ಇಲ್ಲ ಆದ್ದರಿಂದ ಪರಿಸ್ಥಿತಿ ಅಯೋಮಯವಾಗಿದೆ ಜನ ಬರೀ ಇವರ ಜಗಳ ನೋಡುವುದೆ ಆಗಿದ ಯಾರ ಮತ್ತೆ ಮುಖ್ಯ ಮಂತ್ರಿ ಆಗಬೇಕು, ಸಿದ್ದರಾಮಯ್ಯವರನ್ನು ಯಾವ ಕೇಳಗೆ ಇಳಸಬೇಕೆ ಎಂಬ ಚರ್ಚೆ ಜೋರಾಗಿದೆ ಹಿರಿಯ ನಾಯಕಶಶಿ ತರೂರ್ ಸಭೆಯಲ್ಲಿಯೂ ಸಹ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದ್ದಾರೆ ಆದರೆ ಅವರು ಅದಕ್ಕೆ ಉತ್ತರ ನೀಡಿಲ್ಲ ಎಂದರು.
ಅಭಿವೃದ್ಧಿ ಕೆಲಸ ಸಂಪೂರ್ಣ ನಿಂತಿದೆ ಇನ್ನು ರಾಜ್ಯ ಸರ್ಕಾರ ಭಾರತ ಸರ್ಕಾರದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೂ ಅನುದಾನ ನೀಡುತ್ತಿಲ್ಲ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಮೇಲಿಂದ ಹೇಳಿದ್ದಾರೆ ಅದಕ್ಕೆ ಪೆಂಡಿಂಗ್ ಅಂತ ಅಧಿಕಾರಿಗಳು ನೆಪ ಹೇಳುತ್ತಿದ್ದಾರೆ ಮೇಲಿಂದ ಅಂದ್ರೆ ಯಾರು ಯಾಕೆ ದುಡ್ಡು ಕೊಡತ್ತಿಲ್ಲ. ಪರಿಶೀಲನೆ ಮಾಡಿ ಗುತ್ತಿಗೆದಾರಿಗೆ ಹಣ ನೀಡಲಿ ಆರು ತಿಂಗಳಲ್ಲೇ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿಗೆ 40% ಅಂತಿದ್ದರೂ ಆದರೆ ಕಾಂಗ್ರೆಸ್ ಪರಿಸ್ಥಿತಿ ಬರೀ ಆರು ತಿಂಗಳಲ್ಲಿ ಭೀಕರವಾಗಿದೆ ಸಂಪೂರ್ಣವಾಗಿನೆಲ ಕಚ್ಚುವ ಪರಿಸ್ಥಿತಿ ತಲುಪಲಿದೆ ಎಂದರು.
ಡಿಕೆ ಶಿವಕುಮಾರ್ ಮುನ್ನಡೆ ಅಥವಾ ಹಿನ್ನಡೆ ಅದು ಅವರಿಗೆ ಬಿಟ್ಟ ವಿಚಾರ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ವಿಚಾರದ ಪ್ರಕರಣ ಕುರಿತ ಪ್ರತಿಕ್ರಿಯೆ ನೀಡಿದ ಅವರುಇದರ ಅರ್ಥ ಕೋರ್ಟ್ ಒಪ್ಪಿದೆ ಅಂತಲ್ಲಾ ಆದರೆ ತನಿಖೆ ಮುಂದುವರೆಯ ಲಿದೆ ಎಂದು ಬೆಳೆ ವಿಮೆ ಭಾರತ ಸರ್ಕಾರದ್ದು ಆದರೆ ಬೆಳೆ ವಿಮೆ ಏಜೆನ್ಸಿ, ಪರಿಹಾರದ ಪ್ರಮಾಣ, ಎಲ್ಲವನ್ನೂ ನಿರ್ಧಾರ ಮಾಡುವುದು ರಾಜ್ಯ ಸರ್ಕಾರ, ಹೀಗಾಗಿ ತಪ್ಪಾಗಿದೆ ಅದನ್ನು ಮರು ಪರಿಶೀಲನೆ ಮಾಡುತ್ತವೆ ಎಂದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ ಮೊದಲಿನಿಂದಲೂ ಚಿಂತನೆಯಿದ್ದು ಈಗ 324 ಕೋಟಿ ಯೋಜನೆಯ ಪ್ಲಾನ್ ಸಿದ್ದವಾಗಿದೆ ಇದಕ್ಕೆ ಅನುಮೋದನೆ ಪಡೆದು ಟೆಂಡರ್ ಕರೆಯಲಾಗುತ್ತದೆ ಎಂದರು.