ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೆಆರ್ ಪುರ ಸಮೀಪದ ಚಿಕ್ಕಬಸವನಪುರದಲ್ಲಿ 5 ಎಕರೆ ಸರ್ಕಾರಿ ಭೂಮಿಯನ್ನು ಖಾಸಗೀ ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಪೂರ್ವ ತಾಲ್ಲೂಕು ವಿಶೇಷ ತಹಶೀಲ್ದಾರ್ ಎಸ್ , ಆರ್ ಮಹೇಶ್ ಅವರಿಗೆ ದೂರು ನೀಡಿ ಒತ್ತುವರಿ ಜಾಗವನ್ನ ತೆರವುಗೊಳ್ಳಿಸುವಂತೆ ಗ್ರಾಮಸ್ಥರು ಮನವಿ ಪತ್ರಸಲ್ಲಿಸಿದ್ದಾರೆ .
ಈ ವೇಳೆ ಮಾಧ್ಯಮಗಳ ಜೊತೆ ದೂರುದಾರ ಪ್ರತಾಪ್ ಕುಮಾರ್ ಮಾತನಾಡಿ ಚಿಕ್ಕಬಸವನಪುರದ ಸರ್ವೆ ನಂ. 1. ರಲ್ಲಿ 16 ಎಕರೆ, 18 ಗುಂಟೆ ಸರ್ಕಾರಿ ಜಮೀನಿದ್ದು, ಇದರ ಪೈಕಿ 4 ಎಕರೆ 28 ಗುಂಟೆ ಖರಾಬು ಜಾಗವಾಗಿದ್ದು, ಉಳಿದ 8 ಎಕರೆ 10 ಗುಂಟೆ ಜಾಗದಲ್ಲಿ 3 ಎಕರೆ 10 ಗುಂಟೆ ಭೂಮಿ ಡಿ ರಾಮಯ್ಯರೆಡ್ಡಿ ಎಂಬುವವರಿಗೆ ಮಂಜೂರಾಗಿದೆ . ಉಳಿದ 5 ಎಕರೆ ಸರ್ಕಾರಿ ಭೂಮಿ ಕಬಳಿಸಲು ಅವರ ಅಣ್ಣತಮ್ಮದಿರು ಸರ್ಕಾರಿ ಜಾಗ ನಮ್ಮ ಸ್ವತ್ತು ಎಂದು ನ್ಯಾಯಲಯದ ಮೊರೆ ಹೋಗಿದ್ದು , ನ್ಯಾಯಲಯ ಇದು ಸರ್ಕಾರಿ ಭೂಮಿ ಎಂದು ಸ್ಪಷ್ಟಪಡಿಸಿದೆ .
ಆದರೆ ನಾಗಪ್ಪ ರೆಡ್ಡಿ , ಅವರ ಮಗಳು ಸೇರಿದಂತೆ ಸಹಚರರು ವರ್ತೂರಿನ ಸಬ್ ರಿಜಿಸ್ಟರ್ ಅಧಿಕಾರಿಗಳ ಸಹಕಾರದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿದರು.