ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಗೂಳಹಟ್ಟಿ ಶೇಖರ್ ಕೇಸರಿ ಸಂಘಟನಾ ಚತುರನಿಗೆ ಕಳಿಸಿರೋ ಆಡಿಯೋ ರಾಜ್ಯದಲ್ಲಿ ಭಾರೀ ಸುದ್ದು ಮಾಡ್ತಿದೆ. ನಾಗಪುರದ RSS ಕಛೇರಿಯ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂಬ ಕಾರಣಕ್ಕೆ ನನ್ನನ್ನು ತಡೆದ್ರು ಎಂದು ಬಾಂಬ್ ಸಿಡಿಸಿದ್ದಾರೆ. ಈ ವಿಚಾರ ಕಾಂಗ್ರೆಸ್ ಗೆ ಹಿಂದುತ್ವದ ವಿರುದ್ಧದ ಪ್ರಬಲ ಅಸ್ತ್ರವಾಗಿದ್ದು ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ.. RSS ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಪಂಚದಲ್ಲೇ ಅತೀ ದೊಡ್ಡ ಸ್ವಯಂ ಸೇವಾ ಸಂಘಟನೆ ಅಂತ ಬಿಜೆಪಿಯವರು ಹೇಳಿಕೊಳ್ತಾರೆ.
ಹಿಂದುತ್ವದ ಅಜೆಂಡಾದಡಿಯಲ್ಲಿ ಕೆಲಸ ಮಾಡ್ತಿರುವ ಸಂಘಟನೆ, ಆಗಾಗ ಈ RSS ಮೇಲೆ ಸಾಕಷ್ಟು ವಿವಾದಗಳು ಹುಟ್ಕೊಳ್ತಾನೆ ಇರ್ತಾವೆ. ಜಾತಿ, ಧರ್ಮ, ಅಸಮಾನತೆ ಅನ್ನೋ ಹೇಳಿಕೆಗಳು ಕೇಳಿ ಬರ್ತಿರ್ತಾವೆ ಇದಕ್ಕೆ ಮತ್ತೊಂದು ನಿದರ್ಶನ ಬೆಳಕಿಗೆ ಬಂದಿದೆ ಈಆರೋಪ ಮಾಡಿರೋದು ಬೇರ್ಯಾರು ಅಲ್ಲ ಬಿಜೆಪಿಯ ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್.. ಸಂಘ ಪರಿವಾರದಲ್ಲಿ ಅಸ್ಪೃಶ್ಯತೆ ಆಚರಣೆ ಇದೆಯೇ ಇಲ್ಲವೇ ಎಂದು ಪ್ರಶ್ನಿಸಿ,
Mumbai 26/11 Attacks: ಪಾಕ್ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವ ಮೋಸ್ಟ್ ವಾಂಟೆಡ್ ಉಗ್ರ..!
ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಪ್ರಶ್ನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ಆಗಿದೆ. ನಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬುದು ಖಚಿತವಾಗಿದ್ದರಿಂದ ಮಹಾರಾಷ್ಟ್ರದಲ್ಲಿನ ನಾಗ್ಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹೆಡಗೇವಾರ್ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ ಎಂದು ಪ್ರಶ್ನಿಸಿದ್ದಾರೆ.