ಕಲಬುರಗಿ: -ಕಲಬುರಗಿಯಲ್ಲಿ ಇತ್ತೀಚಿಗೆ ಬರ್ಬರವಾಗಿ ಕೊಲೆಯಾಗಿದ್ದ ವಕೀಲ ಈರಣ್ಣಗೌಡನ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಮುಖ ಆರೋಪಿಯನ್ನ ಪೋಲೀಸ್ರು ಬಂಧಿಸಿದ್ದಾರೆ. ನೀಲಕಂಠ ಪಾಟೀಲ್ ಬಂಧಿತ ಆರೋಪಿ. ಜಮೀನು ವಿವಾದಕ್ಕೆ ಸಂಭಂಧಿಸಿದಂತೆ ಕೊಲೆ ಮಾಡಲಾಗಿತ್ತು ಅನ್ನೋದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಈಗಾಗಲೇ ಬಂಧಿತ ಮೂವರು ಆರೋಪಿಗಳು ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ವಿವಿ ಪೋಲೀಸ್ರು ಮೇನ್ ಕುಳವನ್ನ ಲಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 7 ರಂದು ಸಾಯಿನಗರದ ಅಪಾರ್ಟ್ಮೆಂಟಿನಲ್ಲಿ ಕೊಲೆಯಾಗಿತ್ತು.ಭೀಕರ ದೃಶ್ಯ CCTV ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿತ್ತು..