ಕೇಂದ್ರ ಸರಕಾರ ನ್ಯಾಯವಾದಿಗಳ ಹಿತರಕ್ಷಣೆಗೆ ಮುಂದಾಗಬೇಕೆಂದು ಕಲಬುರಗಿ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶರಣು ಮೋದಿ ಆಗ್ರಹಿಸಿದ್ದಾರೆ.ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಶರಣು ಮೋದಿ ಸಾರ್ವಜನಿಕರ ಹಿತರಕ್ಷಣೆಗೆ ಶ್ರಮಿಸುವ ನ್ಯಾಯವಾದಿಗಳಿಗೆ ರಕ್ಷಣೆ ನೀಡಬೇಕಾದ್ದು ಸರಕಾರದ ಹೊಣೆಗಾರಿಕೆ ಅಂತ ಹೇಳಿದ್ದಾರೆ.
ಈ ಸಂಬಂಧ ಕೇಂದ್ರ ಸರಕಾರ ಅನಗತ್ಯವಾಗಿ ವಿಳಂಬ ಧೋರಣೆ ಮಾಡಬಾರದು ಅಂತ ಕೋರಿದ್ದಾರೆ. ಮಾತ್ರವಲ್ಲ ಸಿಎಂ ಸಿದ್ದರಾಮಯ್ಯನವರೂ ಸಹ ರಾಜ್ಯದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವ ಮೂಲಕ ನ್ಯಾಯವಾದಿಗಳ ಹಿತರಕ್ಷಣೆಗೆ ಮುಂದಾಗಬೇಕು. ಆ ಮೂಲಕ ಇಡೀ ರಾಷ್ಟ್ರಕ್ಕೆ ಮಾದರಿ ಆಗಬೇಕೆಂದು ಮನವಿ ಮಾಡಿದ್ದಾರೆ…