ತುಮಕೂರು: ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬೆವಿಕಂ ಅಧೀಕ್ಷಕ ಇಂಜಿನಿಯರ್ ರವರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ಮಾಡಲಾಗಿದ್ದು, ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ತತ್ಕಾಲ್ ಸ್ಕೀಂ ನಲ್ಲಿ ಅನುದಾನ ನೀಡಬೇಕು.
ಅಕ್ರಮ ಸಕ್ರಮ ಯೋಜನೆಯಡಿ ಪಂಪ್ ಸೆಟ್ ಗಳಿಗೆ ಪುನಃ ಚಾಲನೆ ನೀಡಬೇಕು. ಸರ್ವೆ ನಂಬರ್ ಮನೆಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಗೆ ಅವಕಾಶ. ಅಕ್ರಮ ಸಕ್ರಮ ಗಂಗಾಕಲ್ಯಾಣ ಹೊಸ ಸಂಪರ್ಕ ಕಾಮಗಾರಿಗಳ ಒಂದರಿಂದ ಐದು ಲಕ್ಷದವರೆಗೆ ಹೆಚ್ಚಿಸಬೇಕು. ಒಟ್ಟು 19 ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು. ಬೆಂಗಳೂರು ತುಮಕೂರು ಚಿತ್ರದುರ್ಗ ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಿಂದ ಗುತ್ತಿಗೆದಾರರು ಭಾಗಿ ಯಾಗಿದ್ದರು.