ಬೆಳಗಾವಿ: ಮೇ ಬಳಿಕ ಸರ್ಕಾರ ಪತನ ಎಂಬ ಹೆಚ್ಡಿಕೆ (HD Kumaraswamy) ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ -ಜೆಡಿಎಸ್ನವರು ಪಾಪ ನೀರಿನಿಂದ ತೆಗೆದ ಮೀನಿನ ರೀತಿ ವಿಲಿವಿಲಿ ಎಂದು ಒದ್ದಾಡುತ್ತಿದ್ದಾರೆ. ಅವರು ಭ್ರಮಾ ಲೋಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆ ಪ್ರಸ್ತಾಪಿಸಿದರೂ ಉತ್ತರ ಕೊಡೋಕೆ ಸರ್ಕಾರ ತಯಾರಿದೆ. ನಾವು ಯಾವುದಕ್ಕೂ ವಿಳಂಬ ಮಾಡೋದಾಗಲಿ, ಕಾಲಹರಣ ಮಾಡಲ್ಲ. ಇವತ್ತು ಬರಗಾಲದ ಬಗ್ಗೆ ಚರ್ಚೆಯಾಗುತ್ತಿದ್ದು, ಉತ್ತರ ಕೊಡುತ್ತಿದ್ದೇವೆ.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ವಿಷಯ ಪ್ರಸ್ತಾಪ ಆಗಿದೆ ಎಂದರು. ಬಿಜೆಪಿ (BJP) ನಾಯಕರ ಸಮನ್ವಯ ಕೊರತೆಯಿಂದ ಕಲಾಪದ ಸಮಯ ವ್ಯರ್ಥ ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ಬಿಜೆಪಿಯವರಿಗೆ ಯಾವತ್ತೂ ಸಮನ್ವಯ ಇಲ್ಲ. ಅವರು ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದವರು. ಬಳಿಕ ಸೋತಿದ್ದಾರೆ, ಜನ ತಿರಸ್ಕರಿಸಿದ್ದಾರೆ. ಇದಾದ ಮೇಲೆ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅಲ್ಲಿ ಎರಡು ಗುಂಪು, ಮೂರು ಗುಂಪುಗಳು ಇದ್ದಾವೆ ಎಂದು ಹೇಳಿದರು.