ಚಿಕ್ಕಬಳ್ಳಾಪುರ, ಚಿಂತಾಮಣಿಯಿಂದ ದಲಿತ ಮುಖಂಡರು ಬೆಳಗಾವಿ ಅಧಿವೇಶನಕ್ಕೆ ತೆರಳಲಿ ಮನವಿ ಸಲ್ಲಿಸಲು ಸೋಮವಾರ ದಾವಣಗೆರೆ ಸಮೀಪ ತೆರಳುವಾಗ ಬಸ್ ಅಪಘಾತವಾಗಿ ಕೆಲವರು ಗಾಯಾಳುಗಳಾಗಿದ್ದಾರೆ. ಗಾಯಾಳುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮವನ್ನು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ವಿಚಾರಿಸಿದರು.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಇಂದು ಬೆಳಗಿನ ವೇಳೆ ದಾವಣಗೆರೆ ಹೊರಭಾಗದ ಜಿಲ್ಲಾ ಪಂಚಾಯತ್ ಕಚೇರಿ ಬಳಿ ರಾ.ಹೆದ್ದಾರಿಯಲ್ಲಿ ಬಸ್ ಅಪಘಾತವಾಗಿ ಸುಮಾರು 18 ಜನರು ಗಾಯಾಳುಗಳಾಗಿದ್ದಾರೆ. ಇವರು ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು ನಿವಾಸಿಗಳಾಗಿದ್ದಾರೆ.ಈ ವೇಳೆ ಗಾಯಾಳುಗಳಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಲು ಸೂಚನೆ ನೀಡಿದ ಅವರು ಇವರಿಗೆ ಯಾವುದೇ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಕೂಡಲೇ ನೀಡಲು ತಿಳಿಸಿದರು. ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.