ಹುಬ್ಬಳ್ಳಿ: ಏಕಾಏಕಿ ಶಾರ್ಟ್ ಸರ್ಕೀಟ್ನಿಂದ ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ ತಗುಲಿದ ಘಟನೆ, ಹುಬ್ಬಳ್ಳಿಯ ತಿರುಮಲಕೊಪ್ಪದಲ್ಲಿ ನಡೆದಿದೆ. ಹೌದು,,, ಮಂಜುನಾಥ ಹುಬ್ಬಳ್ಳಿ ಎಂಬುವವರಿಗೆ ಸೇರಿದ ಗೋದಾಮು, ಧಗಧಗನೇ ಹೊತ್ತಿ ಉರಿಯುತ್ತಿದೆ. ಈ ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಇನ್ನು ಬೆಂಕಿ ತಗುಲಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ ಕೂಡಲೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರ ಪ್ರಯತ್ನ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.