ಕರುನಾಡ ಸಂಭ್ರಮಕ್ಕೆ (Karunada Sambharam) ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 14ರಿಂದ 17ರವರೆಗೆ ನಡೆಯುತ್ತಿರುವ ಅದ್ದೂರಿ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗುತ್ತಿದೆ. ಜಿಕೆಜಿಎಸ್ ಟ್ರಸ್ಟ್ ವತಿಯಿಂದ ನಿರಂತರವಾಗಿ ಪ್ರತಿ ವರ್ಷ ನಡೆಯುತ್ತಿರುವ ಈ ಕಾರ್ಯಕ್ರಮ ಈ ಬಾರಿ 12ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸಾಕಷ್ಟು ವಿಶೇಷತೆ ಹಾಗೂ ಕಲರ್ ಫುಲ್ ನಿಂದ ಕರುನಾಡ ಸಂಭ್ರಮ ಕೂಡಿರಲಿದೆ.
ಬೆಂಗಳೂರಿನ ಶ್ರೀನಿವಾಸನಗರದಲ್ಲಿರುವ ಕೆಂಪೇಗೌಡ ಆಟದ ಮೈದಾನದಲ್ಲಿ ಈ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ವರುಣ್ ಸ್ಟುಡಿಯೋಸ್, ರಾಜ್ ಇವೆಂಟ್ಸ್ ಜೊತೆಗೂಡಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ. ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಕನ್ನಡ ಕಲಾಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಬಾರಿ ನಟ ರಮೇಶ್ ಅರವಿಂದ್ (Ramesh Aravind) ಕನ್ನಡ ಕಲಾಭೂಷಣ ಪ್ರಶಸ್ತಿಯನ್ನು (award) ನೀಡಲಾಗುತ್ತದೆ.