ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಯ ಕುರಿತು ಯಾರೇ ಶಾಸಕರು ಚರ್ಚಿಸಿದರೂ ಅದಕ್ಕೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತ್ತಿದೆ. ಈ ಭಾಗದ ಸಮಸ್ಯೆಯ ಬಗ್ಗೆ ಯಾರೇ ಶಾಸಕರು ಚರ್ಚೆ ನಡೆಸಿದರೇ ಅದಕ್ಕೆ ಉತ್ತರ ಕೊಡಲು ಸರ್ಕಾರ ಬದ್ಧವಾಗಿದೆ ಎಂದರು.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಸಮಗ್ರ ಕರ್ನಾಟಕ ನಮ್ಮದು. ವಿಧಾನಸಭೆಯಲ್ಲಿ ಸಹಕಾರ ಕೊಡಲು ನಾವು ಸಿದ್ಧ. ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಪ್ರಸ್ತಾವನೆ ಬರಲಿ ಖಂಡಿತವಾಗಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ತೆರವು ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹತ್ತಿರ ಮಾತನಾಡಿ ಎಂದರು. ಪಾರ್ಲಿಮೆಂಟ್ ಅಫೆರ್ಸ್, ಸ್ಪೀಕರ್ ಅವರ ಸ್ವತ್ತು ಅದು. ಕಲಾಪದಲ್ಲಿ ಬಿಜೆಪಿ ನಾಯಕರ ಮಧ್ಯೆ ಒಮ್ಮತ ಮೂಡದ ವಿಚಾರಕ್ಕೆ ಉತ್ತರಿಸಿ, ಅವರ ಪಕ್ಷದ ವಿಚಾರ ಅವರಿಗೆ ನಮಗೆ ಬೇಡ ಎಂದರು.