ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್ಲಾಲ್ ಶರ್ಮಾ (Bhajanlal Sharma) ಅವರನ್ನು ರಾಸ್ಥಾನದ ನೂತನ ಸಿಎಂ ಆಯ್ಕೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಈ ಬೆನ್ನಲ್ಲೇ ರಾಜವಂಶಸ್ಥೆ ದಿಯಾ ಕುಮಾರಿ (Diya Kumari) ಹಾಗೂ ಹಿರಿಯ ನಾಯಕ ಪ್ರೇಮ್ಚಂದ್ ಬೈರ್ವಾ ಅವರನ್ನ ಉಪಮುಖ್ಯಮಂತ್ರಿಗಳಾಗಿ ನೇಮ ಮಾಡಿದೆ.
ಯಾರೀ ರಾಜಕುಮಾರಿ?
ರಾಜ್ಯಸ್ಥಾನದ ನೂತನ ಉಪಮುಖ್ಯಮಂತ್ರಿಗಳಲ್ಲಿ (Rajasthan DCM) ಒಬ್ಬರಾದ ದಿಯಾ ಕುಮಾರಿ ಅವರು 1970ರ ಜನವರಿ 30 ರಂದು ರಾಜಮನೆತನದಲ್ಲಿ (Royal Family) ಜನಿಸಿದರು. ಅವರ ಅಜ್ಜ ಮಾನ್ ಸಿಂಗ್ II (2ನೇ ಮಾನ್ಸಿಂಗ್) ಜೈಪುರದ ಕೊನೆಯ ಆಡಳಿತ ಮಹರಾಜರಾಗಿದ್ದರು. ಇನ್ನೂ ದಿಯಾ ಕುಮಾರಿ ಅವರ ತಂದೆ ಬ್ರಿಗೇಡಿಯರ್ ಸವಾಯಿ ಭವಾನಿ ಸಿಂಗ್ ಅವರಿಗೆ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿದ ಶೌರ್ಯಕ್ಕಾಗಿ ಮಹಾವೀರ ಚಕ್ರ ನೀಡಿ ಗೌರವಿಸಲಾಗಿತ್ತು.
Crispy Nippattu Recipe: ಈ ಚಳಿಗೆ ಬಿಸಿ ಬಿಸಿ ಗರಿ ಗರಿಯಾದ ನಿಪ್ಪಟ್ಟು ಮಾಡಬಹುದು ನೋಡಿ..!
ದಿಯಾ ಕುಮಾರಿ ಅವರು ಮಹಾರಾಣಿ ಗಾಯತ್ರಿ ದೇವಿ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ಜೈಪುರದ ಮಹಾರಾಣಿ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಮುಗಿಸಿದರು. ಬಳಿಕ ನರೇಂದ್ರ ಸಿಂಗ್ ಎಂಬವರನ್ನ ವಿವಾಹವಾದರು. ದಂಪತಿಗೆ ಜೈಪುರದ ರಾಜವಂಶಸ್ಥ ಪದ್ಮನಾಭ್ ಸಿಂಗ್ ಸೇರಿದಂತೆ ಅವರಿಗೆ ಮೂವರು ಮಕ್ಕಳಿದ್ದಾರೆ. ಆದ್ರೆ 2018ರಲ್ಲಿ ದಿಯಾ ಕುಮಾರಿ ಪತಿಗೆ ವಿಚ್ಛೇದನ ನೀಡಿದ್ದರು.
ಕಾಲೇಜು ಶಿಕ್ಷಣದ ಬಳಿಕ ರಾಜಕೀಯ ಜೀವನದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ದಿಯಾ ಕುಮಾರಿ 2013ರಲ್ಲಿ ರಾಜಸ್ಥಾನದ ಸವಾಯಿ ಮಾಧೋಪುರ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾದರು. ಅಲ್ಲಿಂದ ಅವರ ರಾಜಕೀಯ ಜೀವನ ಶುರುವಾಯಿತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮೇಲೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕಡೆಗೆ ಆಸಕ್ತಿ ತೋರಿದರು. ಇದರಿಂದಲೇ 2019ರ ಲೋಕಸಭಾ ಚುನಾವಣೆಯಲ್ಲಿ ದಿಯಾ ರಾಜ್ಸಮಂದ್ ಕ್ಷೇತ್ರದಿಂದ ಸ್ಪರ್ಧಿಸಿ ಅತ್ಯಧಿಕ ಬಹುಮತದಿಂದ ಗೆದ್ದು ಸಂಸದರಾದರು. ಈ ಮೂಲಕ ರಾಷ್ಟ್ರ ರಾಜಕಾರಣ ಪ್ರವೇಶಿಸಿದರು.
ರಾಜಕೀಯದ ಹೊರತಾಗಿಯೂ ದಿಯಾ ಕುಮಾರಿ, ಎರಡು ಶಾಲೆಗಳು, ಟ್ರಸ್ಟ್ಗಳು, ವಸ್ತುಸಂಗ್ರಹಾಲಯಗಳು, ಹೋಟೆಲ್ಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಒಳಗೊಂಡಂತೆ ಹಲವಾರು ವ್ಯಾಪಾರ ಉದ್ಯಮಗಳನ್ನು ನಿರ್ವಹಿಸುತ್ತಿದ್ದಾರೆ. ಮಹಾರಾಜ ಸವಾಯಿ ಮಾನ್ ಸಿಂಗ್-II ಮ್ಯೂಸಿಯಂ ಟ್ರಸ್ಟ್ ಮತ್ತು ಜೈಗಢ್ ಫೋರ್ಟ್ ಚಾರಿಟೇಬಲ್ ಟ್ರಸ್ಟ್ ಅನ್ನು ಇತರ ಉದ್ಯಮಗಳನ್ನೂ ನಿರ್ವಹಿಸುತ್ತಿರುವುದು ಗಮನಾರ್ಹ.