ʻಓ ನನ್ನ ಚೇತನʼ, ಇದೇ ಡಿ. 15ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಡಾ. ಬಿ. ಜಿ ಮಲ್ಲಿಕಾರ್ಜುನ ಸ್ವಾಮಿ ಈ ಚಿತ್ರವನ್ನು ಮೂನಿಪ್ಲಿಕ್ಸ್ ಸ್ಟುಡಿಯೋಸ್ ಕೆ.ಎ ಸುರೇಶ್ ಅವರ ಮೂಲಕ ರಿಲೀಸ್ ಮಾಡುತ್ತಿದ್ದಾರೆ.
ʼಓ ನನ್ನ ಚೇತನʼ ಸಿನಿಮಾವನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ರಿಲೀಸ್ ಮಾಡಿದ್ದಾರೆ. ಓ ನನ್ನ ಚೇತನ ಟ್ರೈಲರ್ ಲಾಂಚ್ ವೇಳೆ ಪ್ರೇಮಲೋಕ, ಶಾಂತಿಕ್ರಾಂತಿಯ ಅದ್ಭುತ ಸನ್ನಿವೇಶಗಳನ್ನು ನೆನೆದರು. ʻಶಾಂತಿ ಕ್ರಾಂತಿ’ ಸಿನಿಮಾದ ಸೆಟ್ನಲ್ಲಿ ಮೂರು ಸಾವಿರ ಮಕ್ಕಳು ಇರುತ್ತಿದ್ದರು ಎಂದ ರವಿಚಂದ್ರನ್ ಅವರನ್ನೆಲ್ಲ ಹೇಗೆ ಸಂಭಾಳಿಸಿದ್ದರು ಎಂಬ ಆಸಕ್ತಿಕರ ವಿಷಯಗಳನ್ನು ಹಂಚಿಕೊಂಡರು. ಕೊನೆಗೆ ಮೊಬೈಲ್ ನೋಡುವ ಮಕ್ಕಳು, ಮಕ್ಕಳ ಮೊಬೈಲ್ ಹಾವಳಿಗೆ ತತ್ತರಿಸೋ ಪೋಷಕರು ನೋಡಲೇ ಬೇಕಾದಂತಹ ಸಿನಿಮಾ ಓ ನನ್ನ ಚೇತನ. ಓ ನನ್ನ ಚೇತನ ಇಂದಿನ ಪೀಳಿಗೆಯನ್ನ ಎಚ್ಚರಿಸೋ ಸಿನಿಮಾ ಎಂದರು.
ಓ ನನ್ನ ಚೇತನ ಅಪೂರ್ವ ಖ್ಯಾತಿಯ ನಟಿ ಅಪೂರ್ವ ಗೌಡ (ಆಶಾದೇವಿ) ನಿರ್ದೇಶನದ ಚೊಚ್ಚಲ ಚಿತ್ರ. ಅಲೆಮಾರಿ ಖ್ಯಾತಿಯ ಹರಿ ಸಂತು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಪ್ರದೀಪ್ ವರ್ಮಾ ಸಂಗೀತ ಸಂಯೋಜಿಸಿದ್ದಾರೆ.