ನಮ್ಮ ಭಾರತ ಪವಿತ್ರನಾಡು. ತತ್ವಾದರ್ಶಗಳ ನೆಲೆವೀಡು. ಈ ಪುಣ್ಯ ಭೂಮಿಯಲ್ಲಿ ಹುಟ್ಟಿದ ಋಷಿಗಳು, ಮಹರ್ಷಿಗಳು, ತತ್ವಜ್ಞಾನಿಗಳು, ಶರಣರು, ದಾಸರು, ಸಾಧು ಸಂತರು, ಸತ್ಪುರುಷರು ಮತ್ತು ಮಠಾಧಿಪತಿಗಳು ಸಮಾಜವನ್ನು ಅಜ್ಞಾನದಿಂದ ಸುಜ್ಞಾನದೆಡೆಗೆ ಕೊಂಡೊಯ್ದಿದ್ದಾರೆ ವಿಶ್ವಗುರು ಬಸವಣ್ಣನವರು
ಗುರುಸ್ಥಾನದಲ್ಲಿ ನಿಂತು ಜನರಲ್ಲಿ ಸದ್ಗುಣಗಳ ಬೀಜ ಬಿತ್ತಿ, ಸದಾ ಜೀವನಾದರ್ಶ ಮೌಲ್ಯ, ಜ್ಞಾನ ಪಸರಿಸಿ, ಸಮಾಜ ಕಟ್ಟುವಲ್ಲಿ ಇವರ ಸೇವೆ ಅನನ್ಯವಾಗಿದೆ ಎಂದು ಶ್ರೀ ಪರಮಪೂಜ್ಯ ಬಸವಗೀತಾ ಮಹಾತಾಯಿಯವರು ಹೇಳಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ವಿರಕ್ತ ಮಠದಲ್ಲಿ ಇಳಕಲ್ಲಿನ ಪರಮಪೂಜ್ಯ ಲಿಂಗೈಕ ಶ್ರೀ ಮ. ನಿ. ಪ್ರ ಡಾ ಮಾಹಾಂತ ಶಿವಯೋಗಿಗಳವರ ಹಾಗೂ ಶ್ರೀ ಮ. ನಿ. ಪ್ರ. ಗುರುಮಹಾಂತ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಪ್ರತಿ ವರ್ಷದಂತೆ ಈ ವರ್ಷವೂ ವಿರಕ್ತ ಮಠದ ಪೂಜ್ಯರಾದ ಲಿಂಗ ಶ್ರೀ ಸಿದ್ದರಾಮ ಶಿಯೋಗಿಗಳ,
ಮತ್ತು ಶ್ರೀ ಸಿದ್ಧರಾಮ ಸ್ವಾಮಿಗಳ ಉಪಸ್ಥಿತಿಯಲ್ಲಿ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ ನಿಮಿತ್ಯ ಜರುಗುವ 15 ದಿನಗಳ ಪ್ರವಚನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಬಸವರಾಜ ತೇಗ್ಗಿ. ಈರಣ್ಣ ಗುಣಕಿ. ಶಿವಾನಂದ ದಾಶ್ಯಾಳ. ಶ್ರೀಕಾಂತ್ ಮುತ್ತೂರ. ಗೌರಿಹರ ಮುತ್ತೂರು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ