ಬೆಂಗಳೂರು:- ಪಾನ್ ಬ್ರೋಕರ್ ಮೇಲೆ ಹಲ್ಲೆ ನಡೆಸಿ 60 ಲಕ್ಷ ದರೋಡೆ ಮಾಡಿದ್ದ 5 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.
ಮೊಹಮ್ಮದ್ ರಿಜ್ವಾನ್(24), ಆಶ್ರಫ್(20), ಸತೀಶ್(19), ದಿವಾಕರ್(19) ಮತ್ತು ಮೊಹಮ್ಮದ್ ಇರ್ಪಾನ್(20) ಬಂಧಿತರು.
ಪಾನ್ಬ್ರೋಕರ್ ಕೆಲಸ ಮಾಡುವ ಕೆಜಿಎಫ್ ಮೂಲದ ಸಂಕೇತ್ ಎಂಬುವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಆದರ್ಶ್ ಲೇಔಟ್ ಹಳೆಯ ರಿಜಿಸ್ಟರ್ ಕಚೇರಿ ರಸ್ತೆಯಲ್ಲಿರುವ ಸಿದ್ದಪ್ಪಾಜಿ ಉದ್ಯಾನವನ ಬಳಿ ಇರುವ ಗ್ರಂಥಾಲಯದ ಹತ್ತಿರ ಐದು ಮಂದಿ ದರೋಡೆಕೋರರು ಕರೆಸಿಕೊಂಡಿದ್ದಾರೆ. ಸಂಕೇತ್ ಅವರು ಸ್ಥಳಕ್ಕೆ ಬರುತ್ತಿದ್ದಂತೆ ಏಕಾಏಕಿ ಮಚ್ಚಿನಿಂದ ಹಲ್ಲೆ ಮಾಡಿ ಅವರ ಬಳಿ ಇದ್ದ 60 ಲಕ್ಷ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಸವೇಶ್ವರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪ್ರಮುಖ ಆರೋಪಿ, ಕುರುಬರಹಳ್ಳಿಯ ಜೆಸಿ ನಗರ ನಿವಾಸಿ ಮೊಹಮ್ಮದ್ ರಿಜ್ವಾನ್(ಎಂಬಾತನನ್ನು ಬಂಧಿಸಿದ್ದಾರೆ.