ಧಾರವಾಡ : ಸರಿಯಾದ ಸಮಯಕ್ಕೆ ಬಸ್ ಬಿಡ್ತಿಲ್ಲ.. ಸರಿಯಾಗಿ ಶಾಲೆಗೆ ಹೋಗಲು ಆಗ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಧಾರವಾಡ ರಾಮನಗರ ಬಡಾವಣೆಯಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಬಸ್ ಮುಂಬಾಗದಲ್ಲಿ ಪ್ರತಿಭಟನೆ ನಡೆಸಿದರು.
ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಎಷ್ಟೇ ಬೇಡಿಕೊಂಡರು ಸರಿಯಾದ ಸಮಯಕ್ಕೆ ಬಸ್ ಬರ್ತಿಲ್ಲ ನಿತ್ಯ ಶಾಲೆಗೆ ಹೋಗಲು ಆಗ್ತಿಲ್ಲ ಹಿಂಗಾದ್ರೆ ಹೆಂಗೆ ನಾವು ಕಲಿಯುವುದು ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪರೀಕ್ಷಾ ಸಂದರ್ಭದಲ್ಲಿ ಈ ರೀತಿ ಬಸ್ ಬಿಡ್ದೇ ಚೆಲ್ಲಾಟ ಆಡುತ್ತಾ ಇರೋ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಕೇಳೋರು ಯಾರು ಅಧಿಕಾರಿಗಳೇ ವಿದ್ಯಾರ್ಥಿಗಳ ಗೋಳು… ಕೇಳಿ ಎಂದು ಆಗ್ರಹಿಸಿದರು. ಈ ಗಂಭೀರವಾಗಿ ಪರಿಗಣಿಸಿ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸ್ಥಳಿಯರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದರು.