ಬೆಂಗಳೂರು: ಬೇರೆ ಯುವಕರಿಂದ ಬರುತ್ತಿದ್ದ ಫೋನ್ ಕಾಲ್ಗಳ (Phone Call) ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆಯೊಬ್ಬಳು ತನ್ನ ಕಾನ್ಸ್ಟೇಬಲ್ ಪ್ರಿಯಕರನನ್ನೇ ಬೆಂಕಿಹಚ್ಚಿ ಕೊಂದಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ (Puttenahalli Police Station) ವ್ಯಾಪ್ತಿಯಲ್ಲಿ ನಡೆದಿದೆ.
ಹೌದು,ಮದುವೆಯಾಗಿದ್ದರೂ ಎರಡೆರಡು ಪ್ರೇಮಿಗಳನ್ನು ಮೆಂಟೇನ್ ಮಾಡುತ್ತಿದ್ದ ಆಕೆ ಒಬ್ಬರಿಗೆ ಗೊತ್ತಾಗದಂತೆ ಇನ್ನೊಬ್ಬನ ಜತೆ ಚಕ್ಕಂದ ಆಡುತ್ತಿದ್ದಳು. ಇದು ಪೊಲೀಸ್ ಕಾನ್ಸ್ಟೇಬಲ್ಗೆ ಗೊತ್ತಾಯಿತು. ಆತ ಅದನ್ನು ಪ್ರಶ್ನಿಸಿದ್ದೇ ತಡ, ಆಕೆ ಪೆಟ್ರೋಲನ್ನು ಅವನ ಮೇಲೆ ಸುರಿದು ಬೆಂಕಿ ಹಚ್ಚೇ ಬಿಟ್ಟದ್ದಾಳೆ.
ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಅವರಿಬ್ಬರೂ ಜತೆಯಾಗಿ ಕೆಲಸ ಮಾಡುತ್ತಿದ್ದರು.ಅವನು ಪೊಲೀಸ್ ಕಾನ್ಸ್ ಟೇಬಲ್ ಸಂಜಯ್. ಅವಳು ಹೋಮ್ ಗಾರ್ಡ್ ರಾಣಿ. ಅವರಿಬ್ಬರು ಠಾಣೆಯಲ್ಲಿ ಕೆಲಸ ಮಾಡಿದ್ದಕ್ಕಿಂತ ಲವ್ವಿಡವ್ವಿ ಮಾಡ್ಕೊಂಡು ಚಕ್ಕಂದ ಆಡಿದ್ದೇ ಹೆಚ್ಚು. ಹಾಗಂತ ಅವಳೇನೂ ಇನ್ನೂ ಎಳೆ ಯುವತಿಯಲ್ಲ. ಮದುವೆಯಾಗಿ ಗಂಡ ಇದ್ದಾನೆ, ಮಕ್ಕಳೂ ಇದ್ದಾರೆ.
ಆದರೆ, ಪ್ರೇಮದ ಆಕರ್ಷಣೆಯನ್ನು ಬಿಡಲಾಗದೆ ಆಕೆ ಕಾನ್ಸ್ಟೇಬಲ್ನನ್ನು ಆವರಿಸಿಕೊಂಡಿದ್ದಳು. 2021ರಿಂದಲೇ ಅವರು ಸ್ವಚ್ಛಂದ ಹಕ್ಕಿಗಳಂತೆ ಹಾರಾಡುತ್ತಿದ್ದರು.ಆದರೆ, ಇತ್ತೀಚೆಗೆ ಯಾಕೋ ಹೋಮ್ ಗಾರ್ಡ್ ಲವ್ವರ್ ಪೊಲೀಸ್ ಕಾನ್ಸ್ಟೇಬಲ್ ನನ್ನು ದೂರ ಮಾಡಲು ಶುರು ಮಾಡಿದ್ದಳು. ಇದು ಅಷ್ಟು ದಿನ ಆಕೆಯ ಜತೆ ಓಡಾಡಿ ಮಜಾ ಮಾಡಿದ್ದ ಕಾನ್ಸ್ಟೇಬಲ್ಗೆ ಸಹಿಸಲು ಸಾಧ್ಯವಾಗಲಿಲ್ಲ. ಏನಾಗಿದೆ ಎಂದು ಹೇಳು ಎಂದು ಆಕೆಯನ್ನು ಪದೇಪದೇ ಕೇಳಿದ್ದ. ಆದರೆ, ಆಕೆ ಏನೂ ಹೇಳಿರಲಿಲ್ಲ.