ಚಾಮರಾಜನಗರ: ಕೋವಿಡ್ ಉಲ್ಬಣ ಹಿನ್ನಲೆ ಅಯ್ಯಪ್ಪಸ್ವಾಮಿ ಭಕ್ತರನ್ನು ತಪಾಸಣೆ ಮಾಡುವಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾವಹಿಸುವಂತೆ ಹಾಗೂ,
ಕರ್ನಾಟಕದಿಂದ ಕೇರಳ ರಾಜ್ಯದ ಅಯ್ಯಪ್ಪಸ್ವಾಮಿಗೆ ತೆರಳುವ ಭಕ್ತರನ್ನು ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇರಳದಲ್ಲಿ ಕೋವಿಡ್ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಕಠಿಣ ಕ್ರಮಕೈಗೊಳ್ಳುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.