ಬೆಳಗಾವಿ:– ಕೇಂದ್ರ ಸರ್ಕಾರದಿಂದ ಕಾರ್ಖಾನೆಗಳು ಇಕ್ಕಟ್ಟಿಗೆ ಸಿಲುಕಿವೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಎಥೆನಾಲ್ ಉತ್ಪಾದನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿದ ನೀತಿಗಳು ಸಕ್ಕರೆ ಕಾರ್ಖಾನೆಗಳನ್ನು ಚಿಂತೆಗೀಡು ಮಾಡಿವೆ. ಹಲವು ಕಾರ್ಖಾನೆಗಳು ₹200 ಕೋಟಿಯಿಂದ ₹500 ಕೋಟಿಯವರೆಗೆ ಹೂಡಿಕೆ ಮಾಡಿವೆ. ಆದರೆ, ಈಗ ಕೇಂದ್ರ ಸರ್ಕಾರ ಬದಲಿಸಿದ ನೀತಿಯಿಂದ ಕಾರ್ಖಾನೆಗಳು ಇಕ್ಕಟ್ಟಿಗೆ ಸಿಲುಕಿವೆ’ ಎಂದು ಸಕ್ಕರೆ ಸಚಿವರು ಹೇಳಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರವು ಎಥೆನಾಲ್ ಉತ್ಪಾದನೆಯನ್ನು ಪ್ರೋತ್ಸಾಹಿಸಿತ್ತು. ಈಗ ನೇರವಾಗಿ ಎಥೆನಾಲ್ ಉತ್ಪಾದಿಸದಂತೆ ನಿರ್ದೇಶಿಸಿದೆ. ಎಥೆನಾಲ್ ಉತ್ಪಾದನೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿಗಳು ಇನ್ನೂ ಬಂದಿಲ್ಲ’ ಎಂದರು.
‘ಸಕ್ಕರೆ ರಫ್ತು ನಿಷೇಧಿಸಲಾಗಿದೆ. ಒಂದು ವೇಳೆ ರಫ್ತಿಗೆ ಅವಕಾಶ ಕೊಟ್ಟರೆ, ಕಾರ್ಖಾನೆಗಳಿಗೆ ಅನುಕೂಲ ಆಗುತ್ತದೆ. ಅಕ್ಕಿ ಮತ್ತು ಈರುಳ್ಳಿ ರಫ್ತು ನಿಷೇಧಿಸಲಾಗಿದೆ. ಆದರೆ, ತಾಳೆಎಣ್ಣೆ ಆಮದು ಮಾಡಿಕೊಳ್ಳುತ್ತಿರುವ ಕಾರಣ ಕೊಬ್ಬರಿ ಧಾರಣೆ ಕುಸಿದಿದೆ’ ಎಂದು ಹೇಳಿದರು.
‘ಕಾರ್ಖಾನೆಗಳಲ್ಲಿ ರೈತರಿಗೆ ತೂಕದಲ್ಲಿ ಆಗುತ್ತಿರುವ ಮೋಸ ತಪ್ಪಿಸಲು, ಮುಂದಿನ ವರ್ಷದೊಳಗೆ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಸರ್ಕಾರದಿಂದಲೇ ತೂಕದ ಮಾಪಕ ಅಳವಡಿಸಲಾಗುವುದು. ಎಲ್ಲ ಕಾರ್ಖಾನೆಗಳು ತೂಕದ ವ್ಯವಸ್ಥೆಯನ್ನು ಅನ್ಲಾಗ್ ಮೋಡ್ನಿಂದ ಡಿಜಿಟಲ್ ಮೋಡ್ಗೆ ಪರಿವರ್ತಿಸುವಂತೆ ತಿಳಿಸಲಾಗಿದೆ’ ಎಂದರು.