ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೋಲಾಹಲ ಎಬ್ಬಿಸಿದ ಲೋಕಸಭಾ ಭದ್ರತಾ ಲೋಪ (Parliament Security Breach) ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಸ್ಮೋಕ್ ಬಾಂಬ್ ದಾಳಿ ಹಿಂದಿನ ಮಾಸ್ಟರ್ ಮೈಂಡ್ ಮೈಸೂರಿಗ ಮನೋರಂಜನ್ (Manoranjan) ಎಂಬ ಅಚ್ಚರಿದಾಯಕ ಅಂಶವನ್ನು ದೆಹಲಿ ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ.
ವರ್ಷದ ಹಿಂದೆಯೇ ಈ ಮಾಸ್ಟರ್ ಪ್ಲಾನ್ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರು ದೊಡ್ಡದು ಮಾಡ್ಬೇಕು. ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್ ಯೋಜನೆ ರೂಪಿಸಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.
Garlic: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಉತ್ತರ
ಬಂಧನಕ್ಕೆ ಒಳಗಾಗಿರುವ 6 ಜನಕ್ಕೂ ಟಿಕೆಟ್ ಬುಕ್ ಮಾಡಿಸಿ ಮೈಸೂರಿಗೆ ಕರೆಸಿಕೊಂಡಿದ್ದ. ವಾಟ್ಸಾಪ್ನ ಮೂಲಕ ಟಿಕೆಟ್ ಕೊಡಿಸಿ ಮೈಸೂರಿಗೆ ಕರೆಸಿದ್ದ. ಮೈಸೂರಿನಲ್ಲಿ ಎಲ್ಲದರ ಪ್ಲಾನ್ ನಡೆದಿತ್ತು. ಈ ಮೂಲಕ ಇಡೀ ಕೇಸ್ನ ಮಾಸ್ಟರ್ ಮೈಂಡ್ ಮನೋರಂಜನ್ ಆಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಮನೋರಂಜನ್ ಎಲ್ಲರ ಮೈಂಡ್ ವಾಷ್ ಮಾಡಿದ್ದ. ಸಾಗರ್ಗೆ ಅತಿ ಹೆಚ್ಚಾಗಿ ಮೈಂಡ್ ವಾಷ್ ಮಾಡಿದ್ದು, ತನಿಖೆಯಲ್ಲಿ ಬಹಿರಂಗವಾಗಿದೆ. ನಿರುದ್ಯೋಗಿ ಆಗಿದ್ದರೂ ಕಾಂಬೋಡಿಯಾಗೆ ಹೇಗೆ ಹೋದಾ? ಕಾಂಬೋಡಿಯಾಗೆ ಕರೆಸಿಕೊಂಡಿದ್ದು ಯಾರು ಎಂಬ ಪ್ರಶ್ನೆಗಳು ಪೊಲೀಸಲ್ಲಿ ಉದ್ಭವಿಸಿದ್ದು, ಈ ಬಗ್ಗೆ ತನಿಖೆಯ ಜಾಡು ಹಿಡಿದಿದ್ದಾರೆ.