ಧಾರವಾಡ: ತಾಲೂಕಿನ ಮರೆವಾಡ ಗ್ರಾಮದಲ್ಲಿ ಇಂದು ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಗೃತಿ ಜಾಥ ಎಲ್ಲರು ಮತದಾಣ ಮಾಡಬೇಕು, ಮತದಾನನಮ್ಮ ಸಂವಿಧಾನಿಕ ಹಕ್ಕು ಎಂದು ಕಾಋತಿ ಮೂಡಿಸಿದರು.
ಗ್ರಾಮದ ಬಸವೇಶ್ವರ ದೇವಸ್ಥಾನ ಬಳಿ ಚಕ್ಕಡಿಗೆ ಜಿಲ್ಲಾ ಪಂಚಾಯತಿಬಯೋಜನಾ ಅಧಿಕಾರಿ ರೇಖಾ ಡೊಳ್ಳಿನವರು ಹಸಿರು ನಿಶಾನೆ ತೋರಿಸುವುದರ ಜೊತೆಗೆ ಚಪ್ಪಾಳೆ ಹೊಡೆಯುವ ಮೂಲಕ ಮೂಲಕ ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಚುನಾವಣಾ ಸಾಕ್ಷರತಾ ಕ್ಲಬ್, ಅಂಜುಮನ್ ಮಹಾವಿದ್ಯಾಲಯ, ಎನ್ನೆಸ್ಸೆಸ್ ಸಹಯೋಗದಲ್ಲಿ ಕಾರ್ಯಕ್ರಮ ನಡೆದಿದ್ದು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾ ಮತದಾನ ಗ್ರಾಮಸ್ಥರಿಗೆ ಸೇರಿದಂತೆ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸದರು.
ಇನ್ನೂ ಜಾಗೃತಿ ಜಾಥಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಜಿ.ಪಂ.ಯೋಜನಾ ಅಧಿಕಾರಿ ರೇಖಾ ಡೊಳ್ಳಿನ ಇತ್ತಿನ ಚುನಾವಣೆಯಲ್ಲಿ ಮತದಾನ ಪ್ರಮಾಣ ಕ್ಷಿಣಿಸುವುದು ಆಘಾತಕಾರಿ ಸಂಗತಿ. ಪ್ರಜ್ಞಾವಂತರು ತಪ್ಪದೇ, ಮತದಾನ ಮಾಡಬೇಕು. ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಸರ್ವರೂ ಹಕ್ಕು ಚಲಾಯಿಸಬೇಕು. ಕೆಲವುವರುಷಗಳು ಮತದಾನ ಮಾಡದಿರಲು ಕಾರಣ ಇರಬಹುದು. ಅಂತವರಿಗೆ ಸರ್ಕಾರ ನೋಟಾ ಅವಕಾಶ ಕಲ್ಪಿಸಿದೆ. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಮತದಾನ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬ ವ್ಯಕ್ತಿ ಕಡ್ಡಾಯ ಮಾತದಾನ ಮಾಡಬೇಕು. ಮುಖ್ಯವಾಗಿ ೧೮ ವರ್ಷ ತುಂಬಿದ ಯುವಕ ಮತ್ತು ಯುವತಿಯರು ಪೋರ್ಟ್ಲ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇವೇಳೆ ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎನ್.ಎಂ.ಮಕಾಂದಾರ ಮಾತನಾಡಿ, ಸರ್ವರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿಯಾಗಿದೆ. ದೇಶದ ಬಗ್ಗೆ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಅಭಿಪ್ರಾಯ ಹೊಂದಲು ಜನರು ಹಕ್ಕು ಚಲಾಯಿಸುವುದು ಮುಖ್ಯ. ಮೊದಲು ಯುವ ಜನಾಂಗ ಮತದಾನದಲ್ಲಿ ಪಾಲ್ಗೊಳ್ಳಬೇಕು. ಜತೆಗೆ ಕುಟುಂಬದ ಸದಸ್ಯರನ್ನು ತೊಡಗಿಸಬೇಕು ಎಂದು ಹೇಳಿದರು.