ಬೆಂಗಳೂರು:- ಅಯೋಧ್ಯಾ ರಾಮಮಂದಿರ ವಿಚಾರವಾಗಿ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸೋ ಸಂಚು ಮಾಡಿದ್ದಾರೆ ಅಂತ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ಆರೋಪಿಸಿತ್ತು.
ಅಲ್ಲದೇ ಇದೇ ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಲು ಹೋದಾಗ ಬಸವನಗುಡಿ ಠಾಣೆ ಪೊಲೀಸರು ದೂರು ಸ್ವೀಕರಿಸಿಲ್ಲ ಎನ್ನಲಾಗಿದೆ.
ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ಪುನೀತ್ ಕೆರೆಹಳ್ಳಿ ಆಗಮಿಸಿದ್ದರು.
ಅಲ್ಲದೇ ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸೋ ತನಕ ಇಲ್ಲಿಂದ ತೆರಳಲ್ಲ ಎಂದು ಧರಣಿ ನಡೆಸಿದರು. ಕೊನೆಗೆ ಹೋರಾಟಕ್ಕೆ ಮಣಿದ ಪೊಲೀಸರು ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.